`ಸಾರಾಂಶ’ದ ಮತ್ತೊಂದು ವೀಡಿಯೋ ಸಾಂಗ್ ಬಂತು….
ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಸಾರಾಂಶ ಎಂಬುದು ವಿಶೇಷ ಕಥಾ ಹಂದರದೊಳಗೆ ನಾನಾ ಬೆರಗುಗಳನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ ಎಂಬ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಅದೀಗ ಈ ಹಾಡಿನ ಮೂಲಕ ಸಮ್ಮೋಹಕವಾಗಿ ಸಾಬೀತಾಗಿ ಬಿಟ್ಟಿದೆ. ಒಟ್ಟಾರೆ ಸಿನಿಮಾದ ಇಂಚಿಂಚನ್ನೂ ಹೊಸತನದೊಂದಿಗೆ ಸಿಂಗರಿಸಬೇಕೆಂಬಂಥಾ ತಪನೆ ಹೊಂದಿರುವವರು ಸೂರ್ಯ ವಸಿಷ್ಠ. ಅದಕ್ಕೆ ಉದಿತ್ ಹರಿತಾಸ್ ರಂಥಾ ಸಂಗೀತ ನಿರ್ದೇಶಕರ ಸಾಥ್ ಸಿಕ್ಕಿರೋದರಿಂದಾಗಿ ಸಾರಾಂಶದ ನಶೆಯ ನಕಾಶೆ ಚೆಂದದ ಹಾಡಿನ ಮೂಲಕ ಪಸರಿಸುವಂತಾಗಿದೆ. ನಶೆಯೋ […]
ರಾಜಧಾನಿ ನಿರ್ದೇಶಕನ ಹೊಸ ಪಟಾಲಂ!
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ಮಹಾಪ್ರಭುಗಳ ಸಂಭ್ರಮವಾದರೆ ಬೆಂಗಳೂರಲ್ಲಿ ಪಟಾಲಂ ಸಂಭ್ರಮ… ಆ ದಿನ ಇಡೀ ಭಾರತೀಯರು ಸಂಭ್ರಮದಲ್ಲಿದ್ದರು. ಸುಮಾರು ವರ್ಷಗಳ ಸುಧೀರ್ಘ ಕಾಯುವಿಕೆಗೆ ಉತ್ತರ ಸಿಕ್ಕ ದಿನ. ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ಮಹಾಪ್ರಭುಗಳಿಗೆ ಅಯೋಧ್ಯೆಯಲ್ಲಿ ಮಹಾ ಸಂಭ್ರಮವಾದರೆ, ಬೆಂಗಳೂರಲ್ಲೂ ಸಹ ಒಂದು ಸಂಭ್ರಮದ ವಾತಾವರಣ… ರಾಜಧಾನಿ ಎಂಬ ಚೆಂದದ ಸಿನಿಮಾವನ್ನು ನಿರ್ದೇಶನ ಮಾಡಿದ್ದ ರಘು ಈಗ ಎಸ್ ಎಲ್ ಭೈರವ್ ಆಗಿ ಹೆಸರು ಬದಲಿಸಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ರಾಜಧಾನಿ ಚಿತ್ರವನ್ನು ನಿರ್ದೇಶನ ಮಾಡಿದ್ದ ರಘು ಜಯ […]
ಸ್ವಾತಿಷ್ಠ ಕೃಷ್ಣನ್ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಿದ ವಿಜಯ್ ಸೇತುಪತಿ..
ವಿನಯ್ ರಾಜ್ ಕುಮಾರ್ ಸಿನಿಮಾಗೆ ಕಾಲಿವುಡ್ ಸ್ಟಾರ್ ಸಾಥ್.. ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಸಂಗಮದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಫೆಬ್ರವರಿ 8ಕ್ಕೆ ಈ ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಈಗಾಗಲೇ ಒಂದು ಸರಳ ಪ್ರೇಮಕಥೆ ಬಳಗ ಪ್ರಚಾರದ ಪಡಸಾಲೆಗೆ ಧುಮುಕಿದೆ. ಅದರ ಭಾಗವಾಗಿ ಇಂದು ನಾಯಕಿ ಸ್ವಾತಿಷ್ಠ ಕೃಷ್ಣನ್ ಕ್ಯಾರೆಕ್ಟರ್ ಟೀಸರ್ ರಿಲೀಸ್ ಮಾಡಲಾಗಿದೆ. ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಕ್ಯಾರೆಕ್ಟರ್ ಟೀಸರ್ ಅನಾವರಣ […]
3 ಯುಗದ ಕಥೆ ಹೇಳಲಿರುವ ARM…
ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ. AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು […]
ಕಿಚ್ಚು ಹಾಯಿಸುತ್ತಾ ಬಂದ ದೇವನಾಂಪ್ರಿಯ!
ಮುಗಿಲ್ ಪೇಟೆ ಡೈರೆಕ್ಷರ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್..ಸಂಕ್ರಾಂತಿ ಹಬ್ಬಕ್ಕೆ ‘ದೇವನಾಂಪ್ರಿಯ’ ಫಸ್ಟ್ ಲುಕ್ ರಿಲೀಸ್. ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್. ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ […]
ಶಭ್ಬಾಷ್: ಶಿಷ್ಯನ ಮೊದಲ ಹೆಜ್ಜೆಗೆ ಕ್ಲಾಪ್ ಮಾಡಿ ಚಾಲನೆ ನೀಡಿದರು ಓಂ ಸಾಯಿಪ್ರಕಾಶ್!
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ […]
`ದಿ ಗೋಟ್ ಲೈಫ್’ ಫಸ್ಟ್ ಲುಕ್ ಪೋಸ್ಟರ್!
ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ 2024ರ ಏಪ್ರಿಲ್ 10ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಪ್ರಭಾಸ್ ಅನಾವರಣಗೊಳಿಸಿದ್ದಾರೆ. ಪ್ರಭಾಸ್ ಹಂಚಿಕೊಂಡಿರುವ ಫಸ್ಟ್ ಲುಕ್ನಲ್ಲಿ ಪೃಥ್ವಿರಾಜ್ ಉದ್ದ […]
ಸೈಕೋ ಥ್ರಿಲ್ಲರ್ “ಉಸಿರು” ಅನಾವರಣವಾಯ್ತು ಹೆಸರು!
ಆರ್.ಎಸ್.ಪಿ. ಪ್ರೊಡಕ್ಷನ್ಸ್ ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಆರ್ಎಸ್ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತಿರುವ ಈ ಚಿತ್ರದ ಪೋಸ್ಟರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಕಾರ್ಯಕ್ರಮ […]
ಮಿಸ್ ಕಾಲ್ ಪ್ರೇಮಕಥೆ ಜೊತೆಯಾಗಿರು ಟ್ರೈಲರ್ ಬಿಡುಗಡೆ!
ರೇಣು ಮೂವೀಸ್ ಮೂಲಕ ಒಂದಷ್ಟು ಸ್ನೇಹಿತರೇ ಸೇರಿ ನಿರ್ಮಿಸಿರುವ ಚಿತ್ರ ಜೊತೆಯಾಗಿರು. ಅಜರಾಮರ, ನಾನೊಬ್ನೆ ಒಳ್ಳೇವ್ನು ಸೇರಿದಂತೆ ಹಲವಾರು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಸತೀಶ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ೩ ಹಾಡುಗಳ ಪ್ರದರ್ಶನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ೨೦೦೯ರಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾದ ಕಥೆ ಈ ಚಿತ್ರದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಆಗ […]
ಹಳ್ಳಿ ಸೊಗಡಿನ ಸಿನಿಮಾ ‘ಕೆರೆಬೇಟೆ’
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತಿವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ಕನ್ನಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ, ಅದೇ ‘ಕೆರೆಬೇಟೆ’. ಈಗಾಗಲೇ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ‘ಕೆರೆಬೇಟೆ’, ಇದೀಗ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇದು ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. ಕೆರೆಬೇಟೆ, ಗೌರಿ ಶಂಕರ್ ನಾಯಕನಾಗಿ ನಟಿಸಿದ್ದಾರೆ. ರಾಜ್ಗುರು ಆಕ್ಷನ್ ಕಟ್ ಹೇಳಿದ್ದಾರೆ. ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ […]