ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ. ಕನ್ನಡ ಚಿತ್ರರಂಗದಲ್ಲಿ ನಟಿ ಸುಧಾರಾಣಿ ಸಲ್ಲಿಸಿದ ಸೇವೆಯನ್ನಾಧರಿಸಿ ಈ ಪ್ರಶಸ್ತಿ ಪ್ರಧಾನ ಮಾಡಲಿದೆ. ಸುಧಾರಾಣಿ ತಾವು ಪ್ರಶಸ್ತಿ ಸ್ವೀಕರಿಸಿದ ಅಮೂಲ್ಯ ಕ್ಷಣಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ್ದಾರೆ.
https://www.instagram.com/p/ByM5IdbHoyu/?utm_source=ig_web_copy_link
“ಅತ್ಯಂತ ಹಳೆಯ ಪಾರಂಪರಿಕ ಪ್ರಶಸ್ತಿಯಲ್ಲಿ ಒಂದಾಗಿರುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕಾಗಿ ಹೆಮ್ಮೆ ಎನಿಸಿದೆ. ಕನ್ನಡ ಚಿತ್ರರಂಗಕ್ಕೆ ನನ್ನ ಸೇವೆಗಾಗಿ ಈ ಪ್ರಶಸ್ತಿ ಲಭಿಸಿದೆ” ಸುಧಾರಾಣಿ ಬರೆದುಕೊಂಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ “ಆನಂದ್” ಮೂಲಕ ಚಿತ್ರ್ರಂಗ ಪ್ರವೇಶಿಸಿದ್ದ ಸುಧಾರಾಣಿ ರಣರಂಗ, ಕೃಷ್ಣ ನೀ ಕುಣಿದಾಗ, ಪಂಚಮ ವೇದ, ಮೈಸೂರು ಮಲ್ಲಿಗೆ, ಮಣ್ಣಿನ ದೋಣಿ ಇತ್ಯಾದಿ ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿದ್ದರು.











































