ಸಾರ್ವಜನಿಕರ ಹಾಡು ಬಂತು ನೋಡೋಣ!

Picture of Cinibuzz

Cinibuzz

Bureau Report

 

ಆಪರೇಶನ್ ಅಲಮೇಲಮ್ಮ ಮತ್ತು ಕವಲು ದಾರಿಯ ನಂತರ ನಟ ರಿಷಿ ಅಭಿನಯಿಸಿರುವ ಮತ್ತೊಂದು ಚಿತ್ರ ಸಾರ್ವಜನಿಕರಿಗೆ ಸುವರ್ಣಾವಕಾಶ. ನಾಯಕ ತನ್ನ ಪ್ರೇಯಸಿಗಾಗಿ ಏನನ್ನಾದರೂ ಮಾಡಲು ಸಿದ್ದನಿರುತ್ತಾನೆ. ಅದಕ್ಕಾಗಿ ಕಂಟಕವೊಂದರಲ್ಲಿ ತಗುಲಿಕೊಂಡ ನಾಯಕ ಅದರಿಂದ ಹೇಗೆ ಹೊರಬರುತ್ತಾನೆ ಎಂಬುದೇ ಸಾರ್ವಜನಿಕರಿಗೆ ಸುವರ್ಣಾವಕಾಶದ ಕಥಾಸಾರಾಂಶ.

ಈಗ ಪುನೀತ್ ರಾಜ್ ಕುಮಾರ್ ಹಾಡಿರುವ “ಏನು ಸ್ವಾಮಿ ಮಾಡೋಣ.. ಯಾರಿಗೇಳ್ಲಿ ಕಷ್ಟಾನ. ಒಂಟಿ ಮಾಡ್ತು ಲೋಕ ನನ್ನನ್ನ ಎನ್ನುವ ಮಜವಾದ ಸಾಂಗು ರಿಲೀಸಾಗಿದೆ. ವಿಶೇಷವಾದ  ಡಾಬಾ ಮತ್ತು ಫುಡ್ ಸ್ಟ್ರೀಟ್ ಸೆಟ್ ಹಾಕಿ ಈ ಹಾಡನ್ನು ಚಿತ್ರೀಕರಿಸಲಾಗಿದೆ. ನೋಡಲು ಪ್ಯಾಥೋ ಸಾಂಗಿನಂತೆ ಕಂಡರೂ ಹುಡುಗರು ಈ ಹಾಡಿಗೆ ಸ್ಟೆಪ್ಪು ಹಾಕೋದು ಗ್ಯಾರೆಂಟಿ.

 ಈ ಚಿತ್ರದಲ್ಲಿ ರಿಷಿಗೆ ನಾಯಕಿಯಾಗಿ ಧನ್ಯಾ ಬಾಲಕೃಷ್ಣ ನಟಿಸುತ್ತಿದ್ದಾರೆ. ಸಾರ್ವಜನಿಕರಿಗೆ ಸುವರ್ಣಾವಕಾಶಕ್ಕೆ ಅನೂಪ್ ರಾಮಸ್ವಾಮಿ ಕಶ್ಯಪ್ ಚಿತ್ರಕತೆ ಬರೆದು ನಿರ್ದೇಶನವನ್ನು ಮಾಡಿದ್ದಾರೆ. ಇನ್ನು ಜನಾರ್ದನ್ ಚಿಕ್ಕಣ್ಣ, ಹರಿಕೃಷ್ಣ ಸಂಭಾಷಣೆ ಬರೆದಿದ್ದು, ವಿಜ್ಞೇಶ್ ರಾಜ್ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ. ಆರ್ ದೇವರಾಜ್, ಪ್ರಶಾಂತ್ ರೆಡ್ಡಿ, ಜನಾರ್ದನ್ ಚಿಕ್ಕಣ್ಣ ಬಂಡವಾಳವನ್ನು ಹೂಡಿದ್ದಾರೆ. ಇನ್ನು ಸಿನಿಮಾ ತಾರಾಂಗಣದಲ್ಲಿ ಸಿದ್ದು ಮೂಲಿಮನಿ, ದತ್ತಣ್ಣ, ರಂಗಾಯಣ ರಘು, ಶೀನು, ಮಿತ್ರ, ಶಾಲಿನಿ ಇತರರಿದ್ದಾರೆ.

ಇನ್ನಷ್ಟು ಓದಿರಿ

Scroll to Top