ಜೈದ್ ಖಾನ್ ಇತ್ತೀಚೆಗೆ ಹೆಚ್ಚು ಪ್ರಚಾರದಲ್ಲಿರುವ ಹೆಸರು. ಅಪ್ಪ ಕರ್ನಾಟಕ ರಾಜ್ಯ ರಾಜಕಾರಣದ ವರ್ಣರಂಜಿತ ವ್ಯಕ್ತಿ. ಕೂತರೂ ನಿಂತರೂ ಸುದ್ದಿಯಾಗುವ ಉದ್ಯಮಿ. ಇಂಥರವ ಮಗ ಸಿನಿಮಾರಂಗಕ್ಕೆ ಬಂದಾಗ ಜನ ತಲೆಗೊಂದು ಮಾತಾಡಿದ್ದರು. ಯಾವಾಗ ಜೈದ್ ನಟನೆಯ ಮೊದಲ ಸಿನಿಮಾ ʻಬನಾರಸ್ʼ ಚಿತ್ರದ ʻಮಾಯ ಗಂಗೆʼ ಹಾಡು ಲೋಕಾರ್ಪಣೆಯಾಯಿತೋ? ಆಗ ಅಂದವರ ಅಂಡು ಸದ್ದು ನಿಲ್ಲಿಸಿತು. ʻಹುಡುಗ ಸಿನಿಮಾರಂಗದಲ್ಲಿ ಭದ್ರವಾಗಿ ನಿಲ್ಲೋದು ಗ್ಯಾರೆಂಟಿʼ ಅಂತಾ ಒಳಗೊಳಗೇ ಮಾತಾಡಿಕೊಂಡರು. ಅಪ್ಪನ ರಾಜಕಾರಣದ ವರ್ಚಸ್ಸು, ವ್ಯವಹಾರ, ಶ್ರೀಮಂತಿಕೆ – ಇವೆಲ್ಲದರ ಹೊರತಾಗಿ […]
ಭಾರತೀಯ ಚಿತ್ರರಂಗದಲ್ಲಿ ತಮಿಳು ನಟ ವಿಜಯ್ ಸೇತುಪತಿ ಬಿಟ್ಟರೆ ಬಹುಶಃ ಅತೀ ಹೆಚ್ಚು ಬ್ಯುಸೀ ಇರುವ ನಟ ಅಂದರೆ ಅದು ಡಾಲಿ ಧನಂಜಯ ಇರಬೇಕು! ಅದ್ಯಾವ ಘಳಿಗೆಯಲ್ಲಿ ದುನಿಯಾ ಸೂರಿ ಟಗರು ಅನ್ನೋ ಸಿನಿಮಾಗೆ ʻಡಾಲಿʼ ಎನ್ನುವ ಪಾತ್ರವನ್ನು ಬರೆದರೋ? ಅದಕ್ಕೆ ಧನಂಜಯಾನೇ ಬೇಕು ಅಂತಾ ಚಾಯ್ಸ್ ಮಾಡಿದರೋ ಗೊತ್ತಿಲ್ಲ. ನುಗ್ಗಿಬಂದ ʻಟಗರುʼ ಜೊತೆ ಡಾಲಿಯ ನಸೀಬೇ ಬದಲಾಗಿಹೋಯ್ತು. ಕನ್ನಡ ಮಾತ್ರವಲ್ಲದೆ, ನೆರೆಯ ತಮಿಳು, ತೆಲುಗು ಚಿತ್ರರಂಗದಿಂದಲೂ ಅವಕಾಶಗಳು ಅರಸಿಬಂದವು. ಟಗರು ಬರುವ ಮುಂಚೆ ಇದೇ ಧನಂಜಯ […]
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ” ದಿಲ್ ಪಸಂದ್” ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್ ನಿರ್ದೇಶಿಸಿದ್ದಾರೆ. ಪ್ರೇಮಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್ ಬಿಡುಗಡೆಯಾಗುವ ಸಾಧ್ಯತೆಯಿದೆ. ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ […]
ಇಪ್ಪತ್ತೈದು ವರ್ಷಗಳ ಹಿಂದೆಅಪಾರ ಜನಪ್ರಿಯತೆ ಪಡೆದ ಧಾರಾವಾಹಿ ‘ಮಾಯಾಮೃಗ’.ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ. ಇಷ್ಟೊಂದು ವರ್ಷಗಳ […]
ಅವರು ಮೂವರು. ತೀರಾ ಸಣ್ಣ ವಯಸ್ಸಿನಿಂದಲೂ ಒಟ್ಟಿಗೇ ಆಡಿ ಬೆಳೆದವರು. ಜೊತೆಯಲ್ಲೇ ಓದಿದವರು ಕೂಡಾ. ಇಬ್ಬರು ಹುಡುಗರ ನಡುವೆ ಅವಳೊಬ್ಬಳು ಹುಡುಗಿ. ಅಲ್ಲೀತನಕ ಬದುಕಿನಲ್ಲಿ ಒಬ್ಬರನ್ನೊಬ್ಬರು ಬಿಡದಂತೆ ಅಂಟಿಕೊಂಡೇ ತಿರುಗಿರುತ್ತಾರೆ. ಒಬ್ಬನಿಗೆ ಮನೆಯಲ್ಲಿ ಹುಡುಗಿ ನೋಡಿ ಮದುವೆ ಮಾಡುತ್ತಾರೆ. ತಾಯಿ ಇಲ್ಲದೆ ಬೆಳೆದ ಇವಳಿಗೂ ಮದುವೆ ಮಾಡಲು ಅಪ್ಪ ನಿರ್ಧರಿಸಿರುತ್ತಾರೆ. ಗೊತ್ತೂ ಗುರಿ ಇಲ್ಲದ, ಸ್ನೇಹ ಸಲುಗೆ ಇಲ್ಲದ, ಅಸಲಿಗೆ ಪರಿಚಯವೇ ಇಲ್ಲದ, ಎಲ್ಲಿಂದಲೋ ಬಂದವನ ಜೊತೆ ಬದುಕು ಆರಂಭಿಸೋದು ಅವಳಿಗೆ ಬಿಲ್ ಕುಲ್ ಇಷ್ಟವಿಲ್ಲ. ತನ್ನ […]
ಸಾಮಾನ್ಯಕ್ಕೆ ಸಿನಿಮಾ ಅಂದರೆ ಯಾವುದಾದರೂ ಒಂದು ಜಾನರನ್ನು ಸೆಲೆಕ್ಟ್ ಮಾಡಿಕೊಂಡು ರೂಪಿಸಿರುತ್ತಾರೆ. ಅದನ್ನು ಮೀರಿ, ಹಿಂದೆ ಪುಟ್ಟಣ್ಣನವರು ʻಹಂಗು, ಅಕ್ಕರೆ, ಮುನಿತಾಯಿʼ ಎನ್ನುವ ಮೂರು ಕಥೆಗಳನ್ನು ಒಂದು ಕಡೆ ಸೇರಿಸಿ ಕಥಾಸಂಗಮ ಹೆಸರಿನ ಸಿನಿಮಾ ಮಾಡಿದ್ದರು. ಇತ್ತೀಚೆಗೆ ನಾಲ್ಕಾರು ಕಥೆಗಳನ್ನು ಸೇರಿಸಿ ಒಂದು ಚಿತ್ರ ರೂಪಿಸುವ ಟ್ರೆಂಡ್ ಆರಂಭವಾಗಿದೆ. ರಿಷಬ್ ಶೆಟ್ಟಿ ಕೂಡಾ ಕಥಾ ಸಂಗಮದ ಹೆಸರಿನಲ್ಲಿ ಏಳು ಕಥೆಗಳನ್ನು ಒಟ್ಟು ಸೇರಿಸಿದ್ದರು. ಈಗ ಬದುಕಿನ ಒಂಭತ್ತು ರಸಗಳನ್ನು ಸೇರಿಸಿ ಒಂಭತ್ತು ಭಿನ್ನ ಕಥೆಗಳೊಂದಿಗೆ ತೆರೆಗೆ ಬಂದಿರುವ […]
ರಂಗಭೂಮಿಯಲ್ಲಿ ಹಲವು ವರ್ಷಗಳ ಅನುಭವವಿರುವ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ “9 ಸುಳ್ಳು ಕಥೆಗಳು” ಚಿತ್ರ ಇದೇ ಶುಕ್ರವಾರ ಅಂದರೆ 9.9.22 ರಂದು ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರದಲ್ಲಿ ನವರಸಗಳನ್ನು ಆಧರಿಸಿದ ಒಂಭತ್ತು ಕಥೆಗಳಿದೆ. ನೈಜಘಟನೆಗಳನ್ನಿಟ್ಟುಕೊಂಡು ಈ ಚಿತ್ರದ ಕಥೆ ಸಿದ್ದ ಮಾಡಿದ್ದೇನೆ. ಇದೇ 9 ನೇ ತಾರೀಖು ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ಮಂಜುನಾಥ್ ಮುನಿಯಪ್ಪ. ಸಾಕಷ್ಟು ರಂಗಭೂಮಿ ಕಲಾವಿದರ ಸಮಾಗಮದಲ್ಲಿ ಸಿದ್ದವಾಗಿರುವ ಚಿತ್ರವಿದು. ನಾನು ಈ ಚಿತ್ರದಲ್ಲಿ ಸಾಹಿತ್ಯ […]
ದೃಶ್ಯಂ ಸಿನಿಮಾ ದಕ್ಷಿಣ ಭಾರತ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಕ್ರೈಂ ಥ್ರಿಲ್ಲರ್ ಜಾನರಿನ ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಭಾರೀ ಹಣ ಗಳಿಸಿತ್ತು. ಮಲೆಯಾಳಂ ಭಾಷೆಯಲ್ಲಿ ಮೊದಲಿಗೆ ತೆರೆಕಂಡಿದ್ದ ಈ ಚಿತ್ರವನ್ನು ನಂತರ ತೆಲುಗು, ಹಿಂದಿ, ಕನ್ನಡ, ತಮಿಳು ಭಾಷೆಗಳೂ ಸಹ ರಿಮೇಕ್ ಮಾಡಿದ್ದವು. ದೃಶ್ಯ ಹೆಸರಿನಲ್ಲಿ ಕನ್ನಡದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅತ್ಯದ್ಭುತವಾಗಿ ನಟಿಸಿದ್ದರು. ಅದಾದ ಬಳಿಕ ದೃಶ್ಯಂ 2 ಕೂಡಾ ತೆರೆಕಂಡಿತ್ತು. ಈಗ ಮಲೆಯಾಳಂನಲ್ಲಿ ದೃಶ್ಯಂ […]