ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ “ಆಯನ” ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ “ಚಿನ್ನಾರಿ ಮುತ್ತ” ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೇ ಗೇಮ್ಸ್” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಎಸ್ ಎ ಚಿನ್ನೇಗೌಡ, ಅಶ್ವಿನಿ ಪುನೀತ್ ರಾಜಕುಮಾರ್, ಶ್ರೀಮುರಳಿ, ವೀಣಾ ಮುಂತಾದ ಗಣ್ಯರು ಸೇರಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಮೂಲಕ ವಿಜಯ ರಾಘವೇಂದ್ರ ಹಾಗೂ ಶ್ರೀಮುರಳಿ ಅವರ ಸೋದರ ಅಳಿಯ(ಅಕ್ಕನ […]
ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ಪುಷ್ಪ 2 ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು,ನಕಾಶ್ ಅಜೀಜ್, ದೀಪಕ್ […]
ಕನ್ನಡದ ಪ್ರತಿಭಾನ್ವಿತ ಜೆಕೆ ಊರೂಫ್ ಜಯರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು. ಹಲವು ಸಿನಿಮಾಗಳ ಮೂಲಕ ಕನ್ನಡ ಸಿನಿರಸಿಕರಿಂದಲೂ ಪ್ರೀತಿ ಪಡೆದಿರುವ ಜಯರಾಮ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಜೆಕೆ ಹೊಸ ಸಿನಿಮಾಗೆ ವೀರ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಯುವ […]
ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ ಗೆ ಪ್ರವೇಶ ಪಡೆದಿರುವ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಇದೀಗ ಮತ್ತೊಂದು ಸಂಭ್ರಮದ ಸಂಗತಿಯನ್ನು ಚಿತ್ರ ತಂಡ ಹಂಚಿಕೊಂಡಿದೆ. ಈ ಚಿತ್ರಕ್ಕೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಲಭಿಸಿದೆ. ಈ ಮೂಲಕ ಸಹದೇವ್ ಕೆಲವಡಿ ಮೊದಲ ಪ್ರಯತ್ನದಲ್ಲಿಯೇ ತಮ್ಮ ನಿರ್ದೇಶನದ ಕಸುವನ್ನು ಸಾಬೀತುಪಡಿಸಿದ್ದಾರೆ. ಈ ಸುದ್ದಿಯೊಂದಿಗೆ ಕೆಂಡದ ಸುತ್ತ […]
ಕಲ್ಕಿ ಪ್ರೊಡಕ್ಷನ್ ನಡಿ ವೆಂಕಟೇಶ್.ಎಸ್ ನಿರ್ಮಾಣ ಮಾಡುತ್ತಿರುವ ಕನ್ನಡ ಮಾಧ್ಯಮ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದರು. ಹಿರಿಯ ಸಾಹಿತಿ ದೊಡ್ಡರಂಗೇಗೌಡ ಮಾತನಾಡಿ, ಎಲ್ಲಿ ಕನ್ನಡ ಅಲ್ಲಿ ದೊಡ್ಡ ರಂಗೇಗೌಡರು. ಆದ್ದರಿಂದ ಕನ್ನಡದ ಯಾವುದೇ ಕಾರ್ಯವಿರಲಿ, ಸಮಾರಂಭವಿರಲಿ. ಗೀತೆ ಪ್ರಸ್ತುತಿ ಅಲ್ಲಿ ನಾನು ಪಾಲ್ಗೊಳ್ಳಲು ಮುಖ್ಯ ಕಾರಣ ಕನ್ನಡವೇ ನನ್ನ […]
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ “ದ ಜಡ್ಜ್ ಮೆಂಟ್” ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಇತ್ತೀಚಿಗೆ ಡಾ|ರಾಜಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು […]
ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ “ಫಾದರ್” ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ “ಫಾದರ್ ಚಿತ್ರದ ಮೊದಲ […]
ನೆನಪಿರಲಿ ಪ್ರೇಮ್ ಚಿತ್ರರಂಗಕ್ಕೆ ಕಾಲಿಟ್ಟು ಕರೆಕ್ಟಾಗಿ 24 ವರ್ಷ ಆಗಿದೆ. ಬೇರೆ ನಟರಿಗೆ ಹೋಲಿಸಿದರೆ ಪ್ರೇಮ್ ನಟಿಸಿದ ಚಿತ್ರಗಳ ಸಂಖ್ಯೆ ತೀರಾ ಕಡಿಮೆ. ಹಾಗೆ ನೋಡಿದರೆ ಪ್ರೇಮ್ ಇಂಡಸ್ಟ್ರಿಗೆ ಬಂದಾಗ ಹೀರೋಗಳ ಕೊರತೆ ಸಿಕ್ಕಾಪಟ್ಟೆ ಇತ್ತು. ಆಗಿನ್ನೂ ಗಣೇಶ್, ದುನಿಯಾ ವಿಜಿ, ಶ್ರೀನಗರ ಕಿಟ್ಟಿ, ಅಜಯ್ ರಾವ್ ಮೊದಲಾದವರೆಲ್ಲ ಹೀರೋಗಳಾಗಿರಲಿಲ್ಲ. ಪೋಷಕ ಪಾತ್ರಗಳಲ್ಲಷ್ಟೇ ಅಭಿನಯಿಸಿಕೊಂಡಿದ್ದರು. ಶರಣ್ ಕೋಮಲ್ ತರದ ಕಲಾವಿದರು ಕಾಮಿಡಿ ಪಾತ್ರಗಳನ್ನು ಮಾಡಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಕಿಚ್ಚ ಸುದೀಪ್ ಮತ್ತು ದರ್ಶನ್ […]
ಏಳೆಂಟು ಕೋಟಿ ಖರ್ಚು ಮಾಡಿ, ಬರೋಬ್ಬರಿ ನಾನ್ನೂರು ಕೋಟಿ ಲಾಭ ಮಾಡಿದ ಚಿತ್ರ ಕಾಂತಾರ. ಈ ಸಿನಿಮಾ ಇಂಥದ್ದೊಂದು ಮ್ಯಾಜಿಕ್ ಕ್ರಿಯೇಟ್ ಮಾಡತ್ತೆ ಅಂತಾ ಯಾರೆಂದರೆ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆ ಹೊತ್ತಿಗೆ ಹೊಂಬಾಳೆ ಫಿಲ್ಮ್ಸ್ ಎಂಭತ್ತು ಕೋಟಿ ಬಜೆಟ್ಟಿನ ಕೆ ಜಿ ಎಫ್ ಮಾಡಿ ಲಾಭ ಮಾಡಿತ್ತಲ್ಲಾ? ಶುರು ಮಾಡಿದಾಗ ಅವರ ಪಾಲಿಗದು ಸಣ್ಣದೊಂದು ಪ್ರಯತ್ನ ಎನ್ನುವಂತಿತ್ತು. ಬಿಡುಗಡೆಯ ನಂತರ ಆ ಚಿತ್ರ ಎಬ್ಬಿಸಿದ ಹವಾ ಹೊಂಬಾಳೆಯ ಕಾನ್ಫಿಡೆನ್ಸ್ ಅನ್ನು ಇಮ್ಮಡಿಗೊಳಿಸಿತು. ಸದ್ಯ ಕಾಂತಾರ-2 ತಯಾರಿ […]
ತಮಿಳುನಾಡಲ್ಲಿ ಕೂಡಾ ಮೊನ್ನೆ ದಿನ ಚುನಾವಣೆ ನಡೆದಿದೆ. ಸ್ಟಾರ್ ನಟರು ಮತದಾನ ಮಾಡುವ ಬೂತ್ ಗಳನ್ನು ಮೇಟೇಂನ್ ಮಾಡೋದು ಪೊಲೀಸರಿಗೆ ತುಂಬಾನೇ ಕಷ್ಟದ ಕೆಲಸ. ನಟ ತಲಾ ಅಜಿತ್ ಗೊತ್ತಲ್ಲಾ? ಸದಾ ಜನರಿಂದ ದೂರವೇ ಉಳಿಯಲು ಬಯಸಿ, ತಮ್ಮ ಪಾಡಿಗೆ ತಾವು ಕಾಡು ಮೇಡು ಅಲೆದುಕೊಂಡಿರುವ ವಿಕ್ಷಿಪ್ತ ಮನಸ್ಥಿತಿಯ ನಟ. ತಾವು ಹೋದಲ್ಲಿ ಬಂದಲ್ಲೆಲ್ಲಾ ಜನಜಂಗುಳಿ ಸೇರಬೇಕು, ಜೈಕಾರಗಳು ಮೊಳಗಬೇಕು ಅಂತಾ ಬಯಸೋದು ಸೆಲೆಬ್ರೆಟಿಗಳ ಸಾಮಾನ್ಯ ಮನಸ್ಥಿತಿ. ಆದರೆ ಅಜಿತ್ ಅದಕ್ಕೆ ಅಪವಾದ. ನನ್ನ ಅಭಿಮಾನಿಗಳು ಅನ್ನಿಸಿಕೊಂಡವರು […]