ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ. ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ […]
ಪ್ರೇಕ್ಷಕರ ಪ್ರೀತಿ ಪಡೆದ ಒಂದು ಸರಳ ಪ್ರೇಮಕಥೆ ಸಿನಿಮಾ ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಫೆಬ್ರವರಿ 8ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಎಲ್ಲ ವರ್ಗದ ಚಿತ್ರಪ್ರೇಮಿಗಳಿಗೆ ಇಷ್ಟವಾಗಿತ್ತು. ವಿನಯ್ ರಾಜ್ಕುಮಾರ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್ನ ಮೋಡಿ ಮಾಡಿತ್ತು. ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಮೆಚ್ಚಿದ್ದ ಒಂದು ಸರಳ ಪ್ರೇಮಕಥೆ ಬಾಕ್ಸಾಫೀಸ್ ನಲ್ಲಿಯೂ ಉತ್ತಮ ಗಳಿಕೆ ಕಂಡಿತ್ತು. ಸುನಿ ಅವರ ಪಂಚಿಂಗ್ ಮಾತು, ಪ್ರೀತಿ, ಭಾವುಕತೆ, ಸುಮಧುರ ಗಾಯನ […]
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾ ಇದೇ ಏ. 19 ರಂದು ತೆರೆಗೆ ಬರುತ್ತಿದೆ. ಸಿನಿಮಾ ಪ್ರಚಾರದ ಭಾಗವಾಗಿ ಈಗಾಗಲೇ ‘ಪುಕ್ಸಟ್ಟೆ ಪೈಸ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದು, ಈ ವೇಳೆ ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು. ‘ಇಂಚರ ಪಿಕ್ಚರ್ಸ್’ ಬ್ಯಾನರಿನಲ್ಲಿ ಮಧುಸೂಧನ ಎ. ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾದಲ್ಲಿ ಭರತ್ […]
ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ […]
ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಂಥ ಜನಪ್ರಿಯ ಹಾಡಿನ ಟೈಟಲ್ ಇಟ್ಟುಕೊಂಡು ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ತಮ್ಮ ಹೊಸ ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿಸಿದ್ದಾರೆ. ಅದರ ಹೆಸರು “ಕರಿಮಣಿ ಮಾಲಿಕ ನೀನಲ್ಲ”. ಮ್ಯೂಸಿಕ್ ಅಡ್ಡಾದ ಲೋಕೇಶ್ ಅವರು ಟೈಟಲ್ ಲಾಂಚ್ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರು ಓಬಯ್ಯ ‘ ಯುಟರ್ನ್ 2 ಆದ ನಂತರ ರಾಮು ಅಂಡ್ ರಾಮು ಚಿತ್ರ ಮಾಡಿದ್ದೆ. ಅದು ಸೆನ್ಸಾರ್ […]
2023ರ ಡಿಸೆಂಬರ್ ತಿಂಗಳಲ್ಲಿ ಸಲಾರ್ ಚಿತ್ರ ತೆರೆಗೆ ಬಂದಿತ್ತು. ಕೆ.ಜಿ.ಎಫ್ ಚಿತ್ರದ ಬ್ರಹ್ಮಾಂಡ ಗೆಲುವಿನ ನಂತರ ಹೊಂಬಾಳೆ ಫಿಲ್ಮ್ಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ನಿನಲ್ಲಿ ತಯಾರಾದ ಚಿತ್ರವಿದು. ಪ್ರಬಾಸ್ ಹೀರೋ ಆಗಿ ನಟಿಸಿದ್ದ ಈ ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆ ದೇಶಾದ್ಯಂತ ವಿಪರೀತ ಕ್ರೇಜ್ ಕ್ರಿಯೇಟ್ ಆಗಿತ್ತು. ಇಡೀ ಇಂಡಿಯಾ ಈ ಚಿತ್ರದತ್ತ ಕುತೂಹಲದ ಕಣ್ಣು ನೆಟ್ಟಿತ್ತು. ಚಿತ್ರ ಬಿಡುಗಡೆಯ ನಂತರ ಇದು ಉಗ್ರಂ ಚಿತ್ರದ್ದೇ ಮತ್ತೊಂದು ಅವತಾರ ಅನ್ನೋದು ರವೀಲ್ ಆಗಿತ್ತು. ಅತಿಯಾದ ನಿರೀಕ್ಷೆಯಿಂದಲೋ ಏನೋ […]
ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ . ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. “ಜಂಟಲ್ ಮ್ಯಾನ್”, ” ಗುರುಶಿಷ್ಯರು” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ […]
ಟಿವಿ9 ಕನ್ನಡ ವಾಹಿನಿಯಿಂದ ಅತೀ ದೊಡ್ಡ ಎಜುಕೇಶನ್ ಎಕ್ಸ್ ಪೋ ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 12 ರಿಂದ 14ರ ವರೆಗೆ ಮತ್ತು ಗುಲ್ಬರ್ಗದಲ್ಲಿ ಏಪ್ರಿಲ್ 27 ಹಾಗು 28 ರಂದು, ಹುಬ್ಬಳ್ಳಿಯಲ್ಲಿ ಮೇ ತಿಂಗಳು 4 ,5 ರಂದು ಆಯೋಜನೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ. ಹಾಗು ಪಿಯುಸಿ ಮುಗಿಸಿ ಮುಂದೇ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಅನ್ನೋ ಗೊಂದಲದಲ್ಲಿರೋರಿಗೆ ಸೂಕ್ತ ಮಾರ್ಗದರ್ಶನ ನೀಡೋ ವೇದಿಕೆ ಇದಾಗಿದೆ. ಪ್ರತಿಷ್ಠಿತ ಕಾಲೇಜುಗಳ ಪ್ರೊಫೆಸರ್ […]
ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ . “ಬನಾರಸ್” ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದಲ್ಲಿ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಸುದ್ದಿ ಅಧಿಕೃತವಾಗಿ ಹೊರಬಂತು. ಈ ವಿಷಯ ತಿಳಿಸುವ ಚಿತ್ರದ ಪೋಸ್ಟರ್ ಸಹ ಎಲ್ಲರ ಗಮನ ಸೆಳೆದಿತ್ತು. ಅಂದಿನಿಂದಲೂ ಚಿತ್ರದ ಶೀರ್ಷಿಕೆ ಏನಿರಬಹುದೆಂಬ? ಕುತೂಹಲ […]
https://cinibuzz.in/bademiyan-chotemiyan/