ರವಿಚಂದ್ರನ್ ಅವರಿಗೆ ಶ್ರೇಷ್ಠತೆಯ ವ್ಯಸನವಿದೆಯಾ? ತಾವು ನಿರ್ದೇಶನ ಮಾಡಿದ್ದು ಮಾತ್ರ ಅತ್ಯದ್ಭುತ… ಬೇರೆಯವರ ಸಿನಿಮಾ ಅಂದರೆ ಇವರಿಗೆ ಅಸಡ್ಡೆಯಾ? ಹೌದು ಅಂತಾ ಅನ್ನಿಸಲು ಕಾರಣ ಅವರದ್ದೇ ಮಾತುಗಳು. ಬೇರೊಬ್ಬರ ಸಿನಿಮಾದಲ್ಲಿ ನಟಿಸುವ ಪ್ರತೀ ಸಂದರ್ಭದಲ್ಲೂ ರವಿಚಂದ್ರನ್ ಬೇಕಾಬಿಟ್ಟಿ ಮಾತಾಡಿಬಿಡುತ್ತಾರೆ. ಯಾವ ಕಾರಣಕ್ಕೆ ಈ ಚಿತ್ರವನ್ನು ಒಪ್ಪಿಕೊಂಡಿರಿ ಅಂತಾ ಯಾವುದೇ ನಟನನ್ನು ಮೀಡಿಯಾದವರು ಪ್ರಶ್ನಿಸೋದು ಸಹಜ. ರವಿಚಂದ್ರನ್ ಅವರು ಒಪ್ಪಿದ್ದಾರೆ ಅಂದರೆ ಈ ಸಿನಿಮಾದಲ್ಲಿ ಏನೇ ವಿಶೇಷತೆಗಳಿರಬಹುದು, ಅದು ಏನೇನು ಅಂತಾ ತಳಿದುಕೊಳ್ಳೋದು ಮಾಧ್ಯಮದವರ ಲೆಕ್ಕಾಚಾರವಾಗಿರುತ್ತದೆ. ಹೀಗೆ ಕೇಳಿದ […]
ಮೊನ್ನೆ ತಾನೆ ಎಲೆಕ್ಷನ್ ಮುಗಿದು ರಿಸಲ್ಟೂ ಹೊರಬಂದಿದೆ. ಈ ಸಲದ ಚುನಾವಣೆಯಲ್ಲಿ ಸಾಕಷ್ಟು ನಟ-ನಟಿಯರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ʻಇವರು ನನ್ನ ಆತ್ಮೀಯರು. ಅದಕ್ಕಾಗಿ ಪ್ರಚಾರ ಮಾಡುತ್ತಿದ್ದೇನೆʼ ಅಂತಾ ಬಾಯಿಮಾತಿಗೆ ಹೇಳಿಕೊಂಡಿದ್ದಾರಾದರೂ, ಬಹುತೇಕರು ದಿನದ ಪೇಮೆಂಟು ಪಡೆದು ಕ್ಯಾನ್ವಾಸ್ ಮಾಡಿ ಬಂದವರೇ! ನಟ, ನಿರ್ದೇಶಕ, ಸಿನಿಮಾರಂಗದಲ್ಲಿ ಒಂದು ಪೀಳಿಗೆಗೆ ಗಾಡ್ ಫಾದರ್ ಅನ್ನಿಸಿಕೊಂಡಿರುವವರು ರಿಯಲ್ ಸ್ಟಾರ್ ಉಪೇಂದ್ರ. ಸಿನಿಮಾವಲಯದಲ್ಲಿ ಎಲ್ಲರೊಂದಿಗೂ ಆತ್ಮೀಯತೆಯಿಂದ ಬೆರೆಯುವವರು. ಹಾಗೇನಾದರೂ ಸ್ನೇಹ, ಪ್ರೀತಿ, ವಿಶ್ವಾಸಕ್ಕೆ ಕಟ್ಟುಬಿದ್ದು ಪ್ರಚಾರಕ್ಕೆ ಹೋಗುವುದಿದ್ದರೆ, ಉಪೇಂದ್ರನ ಪ್ರಜಾಕೀಯಕ್ಕೇ ಎಲ್ಲರೂ […]
ಅನಂತ್ ಕನ್ನಡ ಚಿತ್ರರಂಗದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದ ಅತ್ಯುತ್ಕೃಷ್ಟ ಕಲಾವಿದ. ಅವರಿಗೆ ಇನ್ನೂ ಪದ್ಮಶ್ರೀ ಬಂದಿಲ್ಲ ಅನ್ನೋದೇ ನಂಬಲಾಗದ ವಿಚಾರ. ಅನಂತ್ ನಾಗ್ ಕನ್ನಡ ಮಾತ್ರವಲ್ಲ ವಿಶ್ವದ ಶ್ರೇಷ್ಠ ನಟರ ಲಿಸ್ಟಗೆ ಸೇರುವ ಮಹಾನ್ ನಟ. ಪಾತ್ರ ಯಾವುದೇ ಆದರೂ ಅದರ ಆಳಕ್ಕಿಳಿದು ನಟಿಸುವ ಕಲಾವಿದ. ಕನ್ನಡದ ಮಟ್ಟಿಗೆ ʻಮೆಥೆಡ್ ಆಕ್ಟಿಂಗ್ʼ ಅನ್ನು ಮೈಗೂಡಿಸಿಕೊಂಡ ಅಪರೂಪ ಆಕ್ಟರ್. ಎಷ್ಟೋ ಪಾತ್ರಗಳನ್ನು ನಿರ್ದೇಶಕರು ಅನಂತ್ ನಾಗ್ ಅರನ್ನೇ ಗಮನದಲ್ಲಿಟ್ಟುಕೊಂಡು ಬರೆದುಕೊಂಡಿರುತ್ತಾರೆ. ಆದರೆ, ಆ ಎಲ್ಲ ಪಾತ್ರಗಳನ್ನೂ ಮಾಡಲು […]
ಬಹುತೇಕ ಹೆಣ್ಣುಮಕ್ಕಳ ವಿವಾಹ ನಂತರದ ಬದುಕಿಗೂ ಮುಂಚಿನದಕ್ಕೂ ವ್ಯತ್ಯಾಸಗಳಿರುತ್ತವೆ. ಬದುಕಲ್ಲಿ ಸಾಧನೆ ಮಾಡಬೇಕು, ನೊಂದವರಿಗೆ ಸಹಾಯ ಹಸ್ತ ಚಾಚಬೇಕು ಅಂದುಕೊಂಡವರೆಷ್ಟೋ ಜನ ಮದುವೆ ನಂತರ ಅವರದ್ದೇ ಜಂಜಾಟಗಳು, ಹೊಸ ಬದುಕಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರಲ್ಲೇ ಮಗ್ನರಾಗಿಬಿಡುತ್ತಾರೆ. ಆದರೆ ಸುನಿತಾ ಅವರ ಸುಕೃತವೋ ಏನೋ ಅವರ ಎಲ್ಲ ಕನಸುಗಳಿಗೆ ಬೆಳಕಾಗುವಂತೆ ಪತಿ ಮಂಜುನಾಥ್ ಅವರ ಬೆನ್ನೆಲುಬಾಗಿ ನಿಂತರು. ಬದುಕಲ್ಲಿ ಕಷ್ಟ ಕಂಡವರು ಮಾತ್ರ ಮತ್ತೊಬ್ಬರ ಕಣ್ಣೀರು ಒರೆಸಲು ಸಾಧ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿರುವ ದೊಡ್ಡಬಳ್ಳಾಪುರದಲ್ಲಿ ದೊಡ್ಡರಾಯಪ್ಪನಹಳ್ಳಿ ಎನ್ನುವ ಪುಟ್ಟ […]
‘ಬನಾರಸ್’ ಚಿತ್ರ ಶುರುವಾಗಿ ಎರಡ್ಮೂರು ವರ್ಷಗಳೇ ಆಗಿವೆ. ಇನ್ನು, ಚಿತ್ರದ ಪ್ರಮೋಷನ್ ಶುರುವಾಗಿ ಕೂಡಾ ತಿಂಗಳುಗಳೇ ಆಗಿವೆ. ಒಂದಿಷ್ಟು ಇವೆಂಟುಗಳೂ ಆಗಿವೆ. ಆದರೆ, ಎಲ್ಲೂ ನಾಯಕ ಝೈದ್ ಖಾನ್ ಅವರ ತಂದೆ ಶಾಸಕ ಜಮೀರ್ ಅಹ್ಮದ್ ಖಾನ್ ಚಿತ್ರತಂಡದ ಜೊತೆಯಾಗಲೀ, ಝೈದ್ ಜೊಯಾಗಿಲೀ ಕಾಣಿಸಿಕೊಂಡಿರಲಿಲ್ಲ. ಚಿತ್ರದ ಬಗ್ಗೆಯಾಗಲೀ, ತಮ್ಮ ಮಗನ ಬಗ್ಗೆಯಾಗಲೀ ಮಾತನಾಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಜಮೀರ್ ಅಹ್ಮದ್ ಖಾನ್ ಚಿತ್ರ ಹಾಗೂ ತಮ್ಮ ಮಗನ ಕುರಿತು ಮಾತನಾಡಿದ್ದಾರೆ. ‘ನನಗೆ ಹೆಚ್ಚು ಟೈಮ್ ಸಿಗುವುದಿಲ್ಲ […]
ಲವ್ ಸಬ್ಜೆಕ್ಟಿನ ಸಿನಿಮಾ ಮಾಡುವವರು ತೀರಾ ಫ್ರೆಶ್ ಎನಿಸುವ ಸಂಭಾಷಣೆ ಬೇಕೆನಿಸಿದರೆ, ಹೇಗಾದರೂ ಅಜ್ಜೀಪುರದ ಈ ರವಿಯನ್ನು ಒಪ್ಪಿಸಿ ಬರೆಸಿಕೊಳ್ಳಿ. ಇವರು ರವಿ ಅಜ್ಜೀಪುರ. ಮಾಧ್ಯಮ ವಲಯದಲ್ಲಿವರು ಸದಾ ಪ್ರವಹಿಸುವ ಅಚ್ಚರಿ. ಪ್ರಿಂಟ್ ಮೀಡಿಯಾದಲ್ಲಿ ಹೆಸರು ಮಾಡುತ್ತಿದ್ದಾಗಲೇ ಸಡನ್ನಾಗಿ ಟೀವಿ ಮಾಧ್ಯಮದತ್ತ ಮುಖ ಮಾಡಿದವರು. ಅಲ್ಲಿಂದ ಮತ್ತೆ ಪತ್ರಿಕೆಯ ಕಡೆ ‘ಮನಸು’ ಕೊಟ್ಟವರು. ಪತ್ರಕರ್ತರಾಗಿದ್ದುಕೊಂಡೇ ವಿನ್ಯಾಸ ಕಲಾವಿದರಾಗಿ, ನೂರಾರು ಪುಸ್ತಕಗಳ ಮುಖಪುಟಗಳಿಗೆ ಬಣ್ಣ ತುಂಬಿದವರು. ಒಂದು ಪತ್ರಿಕೆಯ ಕಂಟೆಂಟ್ ಹೇಗಿರಬೇಕು ಅನ್ನೋದರ ಜೊತೆಗೆ ಅದರ ಪ್ರೆಸೆಂಟೇಷನ್ ಕೂಡಾ […]
ನೀರ್ ದೋಸೆ ಯಶಸ್ಸಿನ ಬಳಿಕ ಜಗ್ಗೇಶ್ ಹಾಗೂ ವಿಜಯ ಪ್ರಸಾದ್ ಜೋಡಿ ‘ತೋತಾಪುರಿ’ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾ ಇದಾಗಿದ್ದು, ಕಾಮಿಡಿ ಜತೆಗೆ ಭರಪೂರ ಮನರಂಜನೆ ಒದಗಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ ಮೂಲಕ ಝಲಕ್ ತೋರಿಸಿದ್ದಾರೆ. ಇದಕ್ಕೆ ದೇಶಾದ್ಯಂತ ಸಖತ್ ರೆಸ್ಪಾನ್ಸ್ ಪಡೆದುಕೊಂಡ ಖುಷಿ ಚಿತ್ರತಂಡಕ್ಕಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದು ಎರಡೂ ಭಾಗದ ಚಿತ್ರೀಕರಣವನ್ನೂ ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಚಾಪ್ಟರ್ 1 […]