ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ “ನಾಟ್ ಔಟ್” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ನಾಟ್ ಔಟ್”ಚಿತ್ರವನ್ನ ನಿರ್ಮಾಪಕ ರವಿಕುಮಾರ್ ರವರು ನಿರ್ಮಾಣ ಮಾಡಿದ್ದಾರೆ. ನಾಯಕನಟನಾಗಿ ಅಜಯ್ ಪೃಥ್ವಿ ಅಭಿನಯಿಸಿದ್ದಾರೆ. ರಚನಾ ಇಂದರ್ ನಾಯಕಿ. ರವಿಶಂಕರ್, ಕಾಕ್ರೋಜ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಸಲ್ಮಾನ್, ಗೋವಿಂದೇಗೌಡ, ಪ್ರಶಾಂತ್ ಸಿದ್ದಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಡಾರ್ಕ್ ಹ್ಯೂಮರ್ ಶೈಲಿಯ ವಿಭಿನ್ನವಾದ ಚಿತ್ರವು ಬೆಂಗಳೂರು -ಮೈಸೂರು ಮತ್ತು ಹಲವರು ಜಾಗಗಳು ಚಿತ್ರೀಕರಣ ಮಾಡಲಾಗಿದೆ. […]
ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಆರು ವರ್ಷಗಳಲ್ಲಿ 150ಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ಅಭಿನಯ, ನಾಟಕ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ಜುಲೈ 20ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, […]
ಬೇರೆಲ್ಲಾ ಭಾಷೆಗಳಿಗೆ ಹೋಲಿಕೆ ಮಾಡಿ ನೋಡಿದರೆ ಕನ್ನಡ ಚಿತ್ರರಂಗದಲ್ಲಿ ಹೀರೋಗಳ ಸಂಖ್ಯೆ ತೀರಾ ಕಡಿಮೆ. ಅದರಲ್ಲೂ ಮಾಸ್ ಹೀರೋಗಳಿರೋದು ಬೆರಳೆಣಿಕೆಯ ಮಂದಿ ಮಾತ್ರ. ದೊಡ್ಡ ಮಟ್ಟದ ಸ್ಟಾರ್ ಡಮ್ ಇರೋ ಹೀರೋಗಳಿದ್ದರೆ ಮತ್ತು ಅವರ ಸಿನಿಮಾಗಳು ಒಂದರ ಹಿಂದೊಂದು ರಿಲೀಸ್ ಆದರೆ ಮಾತ್ರ ಚಿತ್ರರಂಗ ಏಳಿಗೆಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ನೋಡಿದರೆ, ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಭಾರೀ ನಷ್ಟ ಅನುಭವಿಸಿತ್ತು. ಈಗ ದರ್ಶನ್ ಕೂಡಾ ಮರ್ಡರ್ ಕೇಸಲ್ಲಿ ಜೈಲುಪಾಲಾಗಿದ್ದಾರೆ. ಈತನಿಗೆ ಬೇಲ್ […]
ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅರೆಸ್ಟ್ ಆಗಿ ಒಂದು ತಿಂಗಳು ಕಳೆದಿದೆ. ದರ್ಶನ್ ಅವರ ನಿಜವಾದ ಅಭಿಮಾನಿಗಳು ತಮ್ಮ ಆರಾಧ್ಯ ನಟ ಮತ್ತು ಅವರ ಗ್ಯಾಂಗ್ ಮಾಡಿದ ಕೃತ್ಯವನ್ನು ಕಂಡು ಮರುಕ ಪಟ್ಟಿದ್ದಾರೆ. ʻಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಿದ್ದ ಒಬ್ಬ ನಟ ಹೀಗೆ ದೃಷ್ಕೃತ್ಯದ ಪಾಲುದಾರನಾಗಿ ಜೈಲು ಸೇರಿದರಲ್ಲಾʼ ಅಂಥಾ ಕೊರಗಿದ್ದಾರೆ. ಆದರೆ ದರ್ಶನ್ ಅಭಿಮಾನಿಗಳ ಹೆಸರಿನಲ್ಲಿ ಕೆಲವು ಪರೋಡಿಗಳು ಮಾಡಬಾರದ ಕೆಲಸಗಳನ್ನೆಲ್ಲಾ ಮಾಡುತ್ತಿದ್ದಾರೆ. ದರ್ಶನ್ ಮಾಡಿರುವ ಕೆಲಸವನ್ನು ಸಮರ್ಥಿಸಿಕೊಂಡು, ಇನ್ನಿತರೆ ನಟರ ಮತ್ತು ಅವರ ಕುಟುಂಬದವರ […]
ಈ ನಾಡಿಗೆ ಇಂಥದ್ದೊಂದು ದುರ್ಗತಿ ಬರಬಾರದಿತ್ತು. ಒಬ್ಬ ನಟ ತನ್ನ ಸಿನಿಮಾ, ನಟನೆಯ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುತ್ತಾನೆ. ಜನಪ್ರಿಯತೆಯ ಅಮಲಿನಲ್ಲಿ ಮೈಮರೆಯುತ್ತಾನೆ. ತನ್ನ ಖಾಸಗೀ ಬದುಕನ್ನು ಕೂಡಾ ಗಲೀಜು ಮಾಡಿಕೊಂಡಿರುತ್ತಾನೆ. ಕುಡಿದ ಮೇಲೆ ಅಕ್ಷರಶಃ ರಾಕ್ಷಸನಂತೆ ವರ್ತಿಸಲು ಶುರು ಮಾಡುತ್ತಾನೆ. ಮನೆ-ಮಂದಿ, ಸ್ನೇಹಿತರು, ತನ್ನೊಟ್ಟಿಗೆ ಕೆಲಸ ಮಾಡುವವರು… ಹೀಗೆ ಯಾರೆಂದರೆ ಯಾರನ್ನೂ ಬಿಡದೆ ಕೈ ಮಾಡುವ, ಬಡಿಯುವ ಶೋಕಿ ಈತನಿಗೆ ಅಂಟಿಕೊಳ್ಳತ್ತೆ. ಇವೆಲ್ಲದರ ಜೊತೆಗೆ ಕಟ್ಟಿಕೊಂಡ ಹೆಂಡತಿಯ ಜೊತೆ ಬಾಳ್ವೆ ನಡೆಸೋದನ್ನು ಬಿಟ್ಟು ಮತ್ತೊಬ್ಬಳ ಸಖ್ಯ […]
ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ. ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್ ರೈ ಮತ್ತು ‘ಡಾರ್ಲಿಂಗ್’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು ವರ್ಷಗಳ ಹಳೆಯ ಮನೆಯಲ್ಲಿ ಕಲರ್ ಫುಲ್ ಆಗಿ ನಡೆಯುತ್ತಿದೆ. ಈ ವೇಳೆ ಸಿನಿಮಾ ತಂಡ ಹೇಳಿಕೊಂಡಿದ್ದು ಹೀಗೆ. ನಟ ಡಾರ್ಲಿಂಗ್ ಕೃಷ್ಣ ಮಾತನಾಡಿ, […]
ತಮ್ಮ ಆದರ್ಶಗಳನ್ನು ಇಡೀ ದೇಶದಕ್ಕೇ ಹಂಚಿ ರಾಷ್ಟ್ರಪಿತ ಅನ್ನಿಸಿಕೊಂಡವರು ಮಹಾತ್ಮಾ ಗಾಂಧಿ. ʻʻಗಾಂಧೀಜಿ ಅವರನ್ನು ಬಿಟ್ಟರೆ ಮತ್ತೊಬ್ಬ ಫಾದರ್ ಆಫ್ ದಿ ನೇಷನ್ ಅಂತಾ ಇದ್ದರೆ ಅದು ನಾನೇ ಅಂತಾ ನನ್ನ ಸ್ನೇಹಿತರು ಹೇಳುತ್ತಿರುತ್ತಾರೆ…ʼʼ ಸ್ವತಃ ಹೀಗೆ ಹೇಳಿಕೊಂಡವರು ನಟ ಪ್ರಕಾಶ್ ರೈ. ಭಾರತದ ಬಹುತೇಕ ಎಲ್ಲ ಭಾಷೆಗಳಲ್ಲೂ ನಟಿಸಿರುವ ಅದ್ಭುತ ನಟ ಪ್ರಕಾಶ್ ರೈ. ಎಲ್ಲ ಭಾಷೆಯ ಹೀರೋಗಳಿಗೆ ಅಪ್ಪನ ಪಾತ್ರವನ್ನು ನಿಭಾಯಿಸಿದವರು ರೈ. ಇರುವರ್ ಚಿತ್ರದಲ್ಲಿ ನಟಿಸಿದಾಗ ರೈ ಅವರಿಗೆ ಇಪ್ಪತ್ತೆಂಟು ವರ್ಷ. ಆದರೆ […]
“ಹುಟ್ಟುಹಬ್ಬ ಎನ್ನುವುದು ತಂದೆ ತಾಯಿ ನಮಗೆ ನೀಡಿರುವ ಗಿಫ್ಟ್. ಅವರಿಗೆ ನಾವು ಯಾವಾಗಲೂ ಚಿರ ಋಣಿಯಾಗಿರಬೇಕು. ಇದೇ ಜುಲೈ 12, ನನ್ನ ಅರವತ್ತೆರಡನೇ ಹುಟ್ಟುಹಬ್ಬ. ಇಷ್ಟು ವರ್ಷಗಳಿಂದ ಸಾವಿರಾರು ಅಭಿಮಾನಿಗಳು ನಮ್ಮ ಮನೆಗೆ ಬಂದು ನನ್ನ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದೀರಿ. ನಿಮ್ಮ ಅಭಿಮಾನಕ್ಕೆ ನನ್ನ ಧನ್ಯವಾದ. ಈ ಸಲದ ಹುಟ್ಟುಹಬ್ಬಕ್ಕೆ ನಾನು ನಿಮಗೊಂದು ಸ್ಪೆಷಲ್ ಗಿಫ್ಟ್ ಕೊಡಲಿದ್ದೇನೆ. ಅದೇನೆಂದರೆ, ನನ್ನ ಹುಟ್ಟುಹಬ್ಬದ ದಿನ ಬಹು ನಿರೀಕ್ಷಿತ “45” ಚಿತ್ರದ ನನ್ನ ಫಸ್ಟ್ ಲುಕ್ ರಿಲೀಸ್ ಆಗಲಿದೆ. ರಮೇಶ್ ರೆಡ್ಡಿ […]
ದಯಾಳ್ ಪದ್ಮನಾಭನ್ ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರರಂಗದಲ್ಲೂ ಹೆಸರು ಮಾಡುತ್ತಿರುವವರು. ತೊಂಭತ್ತರ ದಶಕದಲ್ಲಿ ರೇಲ್ವೇ ಡಿಪಾರ್ಟ್ʼಮೆಂಟಿನ ಕೆಲಸಕ್ಕೆ ರಾಜೀನಾಮೆ ಕೊಟ್ಟು ಚಿತ್ರರಂಗಕ್ಕೆ ಕಾಲಿಟ್ಟವರು. ಓದಲು, ಬರೆಯಲು ಕನ್ನಡವೇ ಗೊತ್ತಿಲ್ಲದಿದ್ದರೂ ಕನ್ನಡ ಸಿನಿಮಾಗಳಲ್ಲಿ ಸಂಭಾಷಣೆಕಾರನಾಗಿ ಹೆಸರು ಮಾಡಿದ್ದವರು. ನಂತರ ಇದೇ ದಯಾಳ್ ಚಿತ್ರ ನಿರ್ದೇಶನಕ್ಕೂ ಕೈ ಇಟ್ಟು ಸಾಕಷ್ಟು ಸಿನಿಮಾಗಳನ್ನು ರೂಪಿಸಿದ್ದಾರೆ. ಕಮರ್ಷಿಯಲ್ಲು, ಕಲಾತ್ಮಕ ಅನ್ನೋ ಚೌಕಟ್ಟುಗಳನ್ನೆಲ್ಲಾ ಮುರಿದು ಎಲ್ಲ ಥರದ ಸಿನಿಮಾಗಳನ್ನು ಮಾಡುತ್ತಾ ಬಂದದಿದ್ದಾರೆ; ಜೊತೆಗೆ ಗೆದ್ದು ತೋರಿಸಿದ್ದಾರೆ. ಒಂದಾದ ಮೇಲೊಂದು ಸಿನಿಮಾಗಳನ್ನೂ ಮಾಡುತ್ತಲೇ ಬಂದಿರುವ ದಯಾಳ್ […]
ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ “Love ಲಿ” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ. ಪ್ರಸ್ತುತ ಕರ್ನಾಟಕದ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂದರ್ಭದಲ್ಲಿ ಸಮಾರಂಭ ಆಯೋಜಿಸಿದ್ದ ನಿರ್ಮಾಪಕರು ಚಿತ್ರತಂಡದ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರವನ್ನು ಮೊದಲಿನಿಂದಲೂ ಪ್ರೋತ್ಸಾಹಿಸುತ್ತಾ ಬಂದಿರುವ […]