ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ ಯದಾ ಯದಾ ಹಿ ಇದೇ ಶುಕ್ರವಾರ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಯುವ ತಾರಾಜೋಡಿ ವಸಿಷ್ಠಸಿಂಹ ಹಾಗೂ ಹರಿಪ್ರಿಯ ತೆರೆಮೇಲೂ ಒಟ್ಟಾಗಿ ಕಾಣಿಸಿಕೊಂಡಿರುವ ಚಿತ್ರ ಇದಾಗಿದ್ದು, ಒಂದಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಅಲ್ಕದೆ ಹರಿಪ್ರಿಯಾ ನೆಗೆಟಿವ್ ಶೇಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಲ್ಲದೆ ಇಡೀ ಚಿತ್ರಕಥೆ ನಿಂತಿರುವುದೆ ಅವರ ಪಾತ್ರದ ಮೇಲೆ. ಇಷ್ಟೆಲ್ಲ ವಿಶೇಷತೆಗಳನ್ನು ಹೊಂದಿರುವ ಈ ಚಿತ್ರದ ಪ್ರೀಮಿಯರ್ ಶೋವನ್ನು ಕೇವಲ ಒಂದು ರೂಪಾಯಿಯಲ್ಲಿ ನೋಡಬಹುದು, ಹೌದು, ದಿ.31ರ ಬುಧವಾರ […]
ಇಂದು ಡಾ. ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ. ಈ ವೀಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಷ್ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. ಹಾಡುಗಳು ಸಾಮಾಜಿಕ […]
ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ […]
ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ”ರಿಚ್ಚಿ” ಅವರಿಗಾಗಿ ಬಂದಿದ್ದೇನೆ. ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು […]
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಪ್ರೀತಿಯ ಮತಬಾಂಧವರಿಗೆ ನಿಮ್ಮ ಮನೆ ಮಗ ಹೆಚ್.ಪಿ ರಾಜಗೋಪಾಲ ರೆಡ್ಡಿ ಮಾಡುವ ನಮಸ್ಕಾರಗಳು. ಇದೇ ವಿಧಾನಸಭಾ ಕ್ಷೇತ್ರದಲ್ಲಿ ಹುಟ್ಟಿ, ಬೆಳೆದ ನಾನು ನನ್ನ ಕ್ಷೇತ್ರದ ಜನರಿಗೆ ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ, ಯಾವುದೇ ಸ್ವಾರ್ಥ ವಿಲ್ಲದೆ, ಇಲ್ಲಿಯವರೆಗೂ ನನ್ನ ಕೈಲಾದಷ್ಟು ಸಹಾಯ ಮಾಡುತ್ತಾ ಬಂದಿದ್ದೇನೆ. ಬಡವರಿಗೆ, ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಹಾಗೂ ನನ್ನ ಕ್ಷೇತ್ರದಲ್ಲಿ ಇರುವ ಎಲ್ಲಾ ಅಶಕ್ತ ಜನರಿಗೆ ಇನ್ನು ಹೆಚ್ಚು ಹೆಚ್ಚು ಸೇವೆಗಳನ್ನು ಮಾಡಬೇಕೆನ್ನುವುದು ನನ್ನ ಮಹಾಭಿಲಾಷೆ. […]
ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ. ನವ ಪ್ರತಿಭೆ ಎಸ್.ವಸಂತ್ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ಕೋರ್ಸ್ನ್ನು […]
ಗಾಲಿ ಜನಾರ್ಧನರೆಡ್ಡಿ ಮಗ ಕಿರೀಟಿ ನಟಿಸುತ್ತಿರುವ ಜೂನಿಯರ್ ಚಿತ್ರದ ಚಿತ್ರೀಕರಣ ಪ್ಲಾನಿನಂತೇ ಸಾಗುತ್ತಿದೆ. ಈ ಚಿತ್ರಕ್ಕಾಗಿ ಕನ್ನಂಬಾಡಿ ಬಳಿಯ ಚಿಕ್ಕರಾಯಹಳ್ಳಿಯನ್ನು ವಿಜಯನಗರವನ್ನಾಗಿ ಮಾರ್ಪಡಿಸುತ್ತಿದ್ದಾರೆ. ಇಡೀ ಹಳ್ಳಿಯಲ್ಲಿ ಒಮ್ಮೆ ತಿರುಗಿದರೆ, ಯಾವುದು ನಿಜವಾದ ಮನೆ, ಯಾವುದು ಸೆಟ್ ಅಂತಲೇ ಗೊತ್ತಾಗುವುದಿಲ್ಲ. ಆಮಟ್ಟಿಗೆ ಖರ್ಚು ಮಾಡಿ ಹಳೆಯ ಗ್ರಾಮವನ್ನಾಗಿ ಪರಿವರ್ತಿಸಿದ್ದಾರೆ. ಬಾಹುಬಲಿ ಚಿತ್ರಕ್ಕೆ ಕಲಾನಿರ್ದೇಶನ ಮಾಡಿರುವ ಮನು ಜಗಧ್ ಈ ಸಿನಿಮಾಗೂ ಆರ್ಟ್ ಡೈರೆಕ್ಷನ್ ಮಾಡುತ್ತಿದ್ದಾರೆ. ಬರಿಯ ತೊಟ್ಟಿಮನೆ ನಿರ್ಮಾಣಕ್ಕೆ ಏನಿಲ್ಲವೆಂದರೂ ಕೋಟಿ ರುಪಾಯಿ ವ್ಯಯಿಸಿದ್ದಾರೆ. ಈ ಹಳ್ಳಿಯಲ್ಲಿ ಕನ್ನಡ […]
ಕುರಿ ಪ್ರತಾಪ ಅನ್ನೋ ಹೆಸರಿನ ಕಾಮಿಡಿ ನಟ ಒಬ್ಬ ಇದ್ದಾನಲ್ಲಾ? ಒಂದು ಕಾಲದಲ್ಲಿ ʻಕುರಿಗಳು ಸಾರ್ ಕುರಿಗಳುʼ ಎನ್ನುವ ಪ್ರಾಂಕ್ ಶೋದಿಂದ ಸಿಕ್ಕಾಪಟ್ಟೆ ಫೇಮಸ್ಸಾಗಿದ್ದವನು ಈತ. ಆ ಕಾರ್ಯಕ್ರಮದ ಮೂಲಕವೇ ಒಂದಿಷ್ಟು ಮಂದಿ ಸಿನಿಮಾದವರನ್ನು ಪರಿಚಯ ಮಾಡಿಕೊಂಡು, ಛಾನ್ಸು ಗಿಟ್ಟಿಸಿಕೊಂಡ. ಅದೇ ಹೊತ್ತಿಗೆ ಸಾಧು ಕೋಕಿಲನ ಹಾವಳಿ ಮಿತಿ ಮೀರಿ ಹೋಗಿತ್ತು. ಸಿನಿಮಾವೊಂದರಲ್ಲಿ ನಟಿಸಲು ಈತ ಲಕ್ಷಾಂತರ ರುಪಾಯಿ ಪ್ಯಾಕೇಜ್ ಡೀಲ್ ಮಾಡುತ್ತಿದ್ದರು. ಕಾಸು ಕೊಟ್ಟರೂ ಕೈಗೆ ಸಿಗದೆ ಆಟವಾಡಿಸುತ್ತಿದ್ದರು. ಪೇಮೆಂಟು ಈಸಿಕೊಂಡು ಸೀದಾ ಗೋವಾ, ಮಲೇಶಿಯಾ […]
ಸಿದ್ದಾರ್ಥ ಸಿನಿಮಾದ ಮೂಲಕ ವಿನಯ್ ರಾಜ್ ಕುಮಾರ್ ಲಾಂಚ್ ಆದಾಗ ಪ್ರೇಕ್ಷಕರು ಮಾತ್ರವಲ್ಲದೆ, ಚಿತ್ರರಂಗದ ವಲಯದಲ್ಲೂ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಮೊದಲ ಸಿನಿಮಾನೇ ಅಂದುಕೊಂಡಂತೆ ಆಗಲಿಲ್ಲ. ಎರಡನೇದಾದರೂ ಕೈ ಹಿಡಿಯಬಹುದು ಅಂದುಕೊಂಡಿದ್ದರು. ರನ್ ಆಂಟನಿ ಎನ್ನುವ ಸಿನಿಮಾ ವಿನಯ್ ರಾಜ್ ಕುಮಾರ್ ವೃತ್ತಿ ಬದುಕಿಗೆ ಭಯಾನಕ ಏಟು ಕೊಟ್ಟುಬಿಟ್ಟಿತು. ದೊಡ್ಮನೆಯ ಬ್ಯಾನರಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ನಿರ್ಮಾಣದ ಕಡೆಯ ಸಿನಿಮಾವೊಂದು ಈ ಮಟ್ಟದಲ್ಲಿರುತ್ತದೆ ಅಂತಾ ಯಾರೂ ಅಂದಾಜಿಸಿರಲಿಲ್ಲ. ಆ ಚಿತ್ರದ ನಿರ್ದೇಶಕ ರಘುಶಾಸ್ತ್ರಿಯ ಮಾತಿನಲ್ಲಿದ್ದ ನಿಯತ್ತು ಕೃತಿಯಲ್ಲಿರಲಿಲ್ಲ. […]
ರಘು ಸಿಂಗಂ ಅವರ ನಿರ್ಮಾಣ ಹಾಗೂ ಸೂರ ಅವರ ನಿರ್ದೇಶನದಲ್ಲಿ ಶ್ರೀನಗರ ಕಿಟ್ಟಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಬಹು ನೀರಿಕ್ಷಿತ ‘ಗೌಳಿ’ ಚಿತ್ರ ಫೆಬ್ರವರಿ ೨೪ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಸಿನಿ ಪ್ರೇಮಿಗಳ ಹೃದಯ ಗೆದ್ದಿದೆ. ‘ಗೌಳಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದೆ. ಗೌಳಿಗರ ಜನಾಂಗಕ್ಕೆ ಸಂಬಂದಿಸಿದ ಕಥೆ ಒಳಗೊಂಡ ಈ ಸಿನಿಮಾದಲ್ಲಿ ಶಿರಸಿ ಸುತ್ತಮುತ್ತಲಿನ […]