ಫ್ಯಾಮಿಲಿ ಡ್ರಾಮಾ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮನರಂಜನೆ ನೀಡುತ್ತಲೇ ಒಂದು ಮೆಸೇಜ್ ನೀಡುವಲ್ಲಿಯೂ ಈ ಚಿತ್ರ ಯಶಸ್ವಿ ಆಗಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬಾರ್ ಮತ್ತು ಮಿಲನಾ ನಾಗರಾಜ್ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಫ್ರೆಶ್ ಜೋಡಿ, ಫ್ರೆಶ್ ಕಂಟೆಂಟ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ಫೆಬ್ರವರಿ 23ರಂದು ತೆರೆಗೆ ಬಂದಿದ್ದ ಫಾರ್ ರಿಜಿಸ್ಟ್ರೇಷನ್ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಟ್ರೇಲರ್ ಮೆಚ್ಚಿದ ಸಂಸದ ತೇಜಸ್ವಿ ಸೂರ್ಯ ಒಂದ್ಕಡೆ ಸಿನಿಮಾ […]
ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ `ಕೆಂಡ’ ಚಿತ್ರದ ಕಡೆಯಿಂದ ಹಂತ ಹಂತವಾಗಿ ಒಂದಷ್ಟು ಅಚ್ಚರಿಯ ಸುದ್ದಿಗಳು ಜಾಹೀರಾಗುತ್ತಲೇ ಬರುತ್ತಿವೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ ನಿರ್ಮಾಣದ ಈ ಸಿನಿಮಾ ಎಲ್ಲ ರೀತಿಯತಿಂದಲೂ ಭಿನ್ನ ಜಾಡಿನದ್ದೆಂಬ ವಿಚಾರ ಈಗಾಗಲೇ ಪ್ರೇಕ್ಷಕ ವಲಯಕ್ಕೆ ದಾಟಿಕೊಂಡಿದೆ. ಇದೀಗ ಕೆಂಡದ ಆಡಿಯೋ ಹಕ್ಕುಗಳ ವಿಚಾರದಲ್ಲಿ ಖುಷಿಯ ಸಂಗತಿಯೊಂದನ್ನು ಚಿತ್ರತಂಡ ಹಂಚಿಕೊಂಡಿದೆ. ಹೆಸರಲ್ಲೇ ನಿಗಿನಿಗಿಸುವ ಆವೇಗವೊಂದನ್ನು ಬಚ್ಚಿಟ್ಟುಕೊಂಡಂತಿರೋ ಸಿನಿಮಾ `ಕೆಂಡ’. ಇದರ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ […]
ಮಾರ್ಡನ್ ರೈತ ಶಶಿ ಮೆಹಬೂಬಾ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದಾರೆ. ಅವರ ಚೊಚ್ಚಲ ಕನಸು ಪ್ರೇಕ್ಷಕರ ಮಡಿಲು ಸೇರೋದಿಕ್ಕೆ ಕೆಲ ದಿನಗಳಷ್ಟೇ ಬಾಕಿ ಇದೆ. ಮಾರ್ಚ್ 15ಕ್ಕೆ ಮೆಹಬೂಬಾ ಮೆರವಣಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಟ್ರೇಲರ್ ಮೂಲಕ ಚಿತ್ರತಂಡವೀಗ ಕುತೂಹಲ ಹೆಚ್ಚಿಸಿದೆ. ಶಶಿ ಹೊಸ ಪ್ರಯತ್ನಕ್ಕೆ ದೇಶದ ಬೆನ್ನೆಲುಬು ರೈತರು ಸಾಥ್ ಕೊಟ್ಟಿದ್ದಾರೆ. ಟ್ರೇಲರ್ ರಿಲೀಸ್ ಮಾಡಿದ ಅನ್ನದಾತರು ಶಶಿ ಕೆಲಸಕ್ಕೆ ಜೊತೆಯಾಗಿ ನಿಂತಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ […]
ಗಟ್ಟಿ ಕಥೆಯೊತ್ತು ಪ್ರೇಕ್ಷಕರನ್ನು ಕಾಡುವುದಕ್ಕೆ ಸೋಮು ಸನ್ನದ್ದನಾಗಿದ್ದಾನೆ. ಹಾಡುಗಳ ಮೂಲಕ ಆಮಂತ್ರಣ ಕೊಟ್ಟಿದ್ದ ಸೋಮು ಸೌಂಡ್ ಇಂಜಿನಿಯರ್ ತಂಡವೀಗ ಟ್ರೇಲರ್ ಮೂಲಕ ಸಿನಿರಸಿಕರನ್ನು ಒಂಟಿಗಾಲಿನಲ್ಲಿ ನಿಲ್ಲಿಸಿದೆ. ಶಿಷ್ಯನ ಹೊಸ ಪ್ರಯತ್ನಕ್ಕೆ ಸುಕ್ಕ ಸೂರಿ ಸಾಥ್ ಕೊಟ್ಟಿದ್ದು, ಡಾಲಿ ಧನಂಜಯ್ ಕೂಡ ಕೈ ಜೋಡಿಸಿದ್ದಾರೆ. ಬೆಂಗಳೂರಿನ SRV ಥಿಯೇಟರ್ ನಲ್ಲಿ ಸೋಮು ಸೌಂಡ್ ಇಂಜಿನಿಯರ್ ಟ್ರೇಲರ್ ಬಿಡುಗಡೆ ಮಾಡಲಾಯಿತು. ಸೂರಿ ಹಾಗೂ ಧನಂಜಯ್ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡದ ಶ್ರಮಕ್ಕೆ ಬೆನ್ನು ತಟ್ಟಿದರು. ಬಳಿಕ ಮಾತನಾಡಿದ ನಿರ್ದೇಶಕ ಸುಕ್ಕ […]
ಭಾರತೀಯ ಚಿತ್ರರಂಗದಲ್ಲಿ ಇದುವರೆಗೆ ಉಳಿಯುವ ಅತಿ ದೊಡ್ಡ ಸಾಹಸ, ದಿ ಗೋಟ್ ಲೈಫ್ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ 28ನೇ ಮಾರ್ಚ್ 2024 ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ: ಹಿಂದಿ, ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡ ಮೇಕೆ ಜೀವನವು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಛಾಪು ಮೂಡಿಸುತ್ತಿದೆ; ಅದರ ಸಂವೇದನಾಶೀಲ ಪೋಸ್ಟರ್ಗಳಿಂದ ಹಿಡಿದು ಅದರ ಸೆರೆಹಿಡಿಯುವ ಮತ್ತು ಹೃದಯಸ್ಪರ್ಶಿಯಾದ ತೆರೆಮರೆಯ ವೀಡಿಯೋಗಳವರೆಗೆ, ಚಿತ್ರವು ದೃಶ್ಯ ಚಮತ್ಕಾರಕ್ಕಿಂತ ಕಡಿಮೆಯಿಲ್ಲ ಎಂದು ಭರವಸೆ ನೀಡುತ್ತದೆ. ಪ್ರಪಂಚದಾದ್ಯಂತದ ಪ್ರೇಕ್ಷಕರಿಗೆ ಅಸಾಧಾರಣವಾದ ದೀರ್ಘ ಕಾಯುವಿಕೆಯಂತೆ […]
ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟು ಸಿಕ್ಕಿದೆ. ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಈ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯುವ ಕಾರ್ಯ ನಡೆಯುತ್ತಾ ಬಂದಿದೆ. ಅದರ ಫಲವಾಗಿಯೇ ಇದೀಗ ಈ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ ಬಿಡುಗಡೆಗೊಳಿಸಿದ್ದಾರೆ! ಅರುಣ್ […]
ರಂಗಭೂಮಿ ಹಿನ್ನೆಲೆಯಿಂದ ಬಂದ ಎಷ್ಟೋ ಕಲಾವಿದರು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅದೇ ಹಾದಿಯಲ್ಲಿ ಸಾಗ್ತಿರುವವರು ರಾಕೇಶ್ ದಳವಾಯಿ. ‘ಧೀರ ಭಗತ್ ರಾಯ್’ ಚಿತ್ರದ ಮೂಲಕ ರಾಕೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಏನು ಕರ್ಮ ಹಾಡು ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕುರಿತು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಪ್ರತಿಕಾಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ನಿರ್ದೇಶಕರಾದ ಕರ್ಣನ್.ಎಸ್, ಏನು ಕರ್ಮ ಸಾಂಗ್ ಗೆ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. […]
ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಚಿತ್ರೀಕರಣ ಶುರುವಾದಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದೆ. ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳುವ ನಿಟ್ಟಿನಲ್ಲಿ ನಿರ್ದೇಶಕರ ಪಟ್ಟುಗಳೆಲ್ಲವೂ ಫಲ ಕೊಟ್ಟಿವೆ. ಇದೀಗ ಅದೇ ಹಾದಿಯಲ್ಲಿ ಸಾಗಿ ಬಂದಿರುವ ಚಿತ್ರತಂಡ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಈ ಸಿನಿಮಾ ಶೀರ್ಷಿಕೆ ಕೇಳಿದರೇನೇ ಒಟ್ಟಾರೆ ಕಥಾನಕದ ಬಗೆಗೊಂದು ಸುಳಿವು ಸಿಗುತ್ತದೆ. ಆದರೆ, ಅಂಥಾ ಯಾವ ಅಂದಾಜಿಗೂ ನಿಲುಕದ ಸ್ವರೂಪದಲ್ಲಿ ಈ ಸಿನಿಮಾವನ್ನು ರೂಪಿಸಿರುವ […]
ಈ ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕೈಲಾಸ ಕಾಸಿದ್ರೆ’. ನಾಗ್ ವೆಂಕಟ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಈ ದಿನಮಾನದ ಯುವ ಜನಾಂಗದ ಕಥೆಯನ್ನೊಳಗೊಂಡಿರುವ, ಎಲ್ಲ ಅಭಿರುಚಿಯ ಯುವ ಪ್ರೇಕ್ಷಕರನ್ನೂ ಕೂಡಾ ಆವರಿಸಿಕೊಳ್ಳುವ ಕಥೆ ಹೊಂದಿರುವ ಚಿತ್ರವೆಂಬ ವಿಚಾರವನ್ನ ಚಿತ್ರತಂಡವೇ ಜಾಹೀರು ಮಾಡಿತ್ತು. ಹಾಡುಗಳ ಮೂಲಕ ಹಂತ ಹಂತವಾಗಿ ಸೆಳೆಯುತ್ತಾ ಸಾಗಿ ಬಂದಿರುವ ಈ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಯುವ ಆವೇಗದ ಕಥೆಯೊಂದರ ಸ್ಪಷ್ಟ ಸುಳಿವಿನೊಂದಿಗೆ ಈ […]
ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಅದಾಗಲೇ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣ ಸಹ ಸಾಂಘವಾಗಿ ಮುಕ್ತಾಯಗೊಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಸಮಾಪ್ತಿಗೊಳಿಸಿಕೊಂಡಿದೆ. ಈ ಹಂತದಲ್ಲಾದ ಅಮೋಘ ಅನುಭವಗಳನ್ನೂ ಹಂಚಿಕೊಂಡಿದೆ! ನಿರ್ದೇಶಕ ರುದ್ರಶಿವ ಅತ್ಯಂತ ಅಚ್ಚುಕಟ್ಟಾಗಿ ಪ್ಲಾನು ಮಾಡಿಕೊಂಡು, ಅದಕ್ಕೆ ತಕ್ಕುದಾಗಿಯೇ ಮುಂದಡಿ ಇಡುತ್ತಿದ್ದಾರೆ. ಅದರ ಭಾಗವಾಗಿಯೇ ಮಡಿಕೇರಿಯ ಗೋಣಿಕೊಪ್ಪ, […]