ರೇಣು ಮೂವೀಸ್ ಮೂಲಕ ಒಂದಷ್ಟು ಸ್ನೇಹಿತರೇ ಸೇರಿ ನಿರ್ಮಿಸಿರುವ ಚಿತ್ರ ಜೊತೆಯಾಗಿರು. ಅಜರಾಮರ, ನಾನೊಬ್ನೆ ಒಳ್ಳೇವ್ನು ಸೇರಿದಂತೆ ಹಲವಾರು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಸತೀಶ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ೩ ಹಾಡುಗಳ ಪ್ರದರ್ಶನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ೨೦೦೯ರಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾದ ಕಥೆ ಈ ಚಿತ್ರದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಆಗ […]
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತಿವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ಕನ್ನಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ, ಅದೇ ‘ಕೆರೆಬೇಟೆ’. ಈಗಾಗಲೇ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ‘ಕೆರೆಬೇಟೆ’, ಇದೀಗ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇದು ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. ಕೆರೆಬೇಟೆ, ಗೌರಿ ಶಂಕರ್ ನಾಯಕನಾಗಿ ನಟಿಸಿದ್ದಾರೆ. ರಾಜ್ಗುರು ಆಕ್ಷನ್ ಕಟ್ ಹೇಳಿದ್ದಾರೆ. ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ […]
ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಈ ಕ್ರೇಜಿ ಕಾಂಬಿನೇಷನ್ನ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ ಡಂಕಿ..ಇದೇ 21ರಂದು ವರ್ಲ್ಡ್ ವೈಡ್ ಚಿತ್ರ ಬಿಡುಗಡೆಯಾಗ್ತಿದ್ದು, ಪ್ರಚಾರ ಭರಾಟೆ ಕೂಡ ಜೋರಾಗಿದೆ. ಡಂಕಿ ಡ್ರಾಪ್-1 ವಿಡಿಯೋ ಅನಾವರಣ ಮಾಡುವ ಮೂಲಕ ಪ್ರಮೋಷನ್ ಶುರು ಮಾಡಿದ್ದ ಚಿತ್ರತಂಡವೀಗ ಡಂಕಿ ಡ್ರಾಪ್-3 ಟೈಟಲ್ ನಡಿ ಎರಡನೇ ಹಾಡನ್ನು ರಿಲೀಸ್ ಮಾಡಿದೆ. ಡಂಕಿ ಸಿನಿಮಾದ ಲುಟ್ ಪುಟ್ ಗಯಾ ಹಾಡು ಮೋಡಿ ಮಾಡ್ತಿದೆ. ಶಾರುಖ್ ಹಾಗೂ ತಾಪ್ಸಿ ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ […]
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. […]
ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]
ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ […]
ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ತೆರೆಗೆ ಬರ್ತಿವೆ. ಅಂತಹದ್ದೇ ವಿಭಿನ್ನ ಬಗೆಯ ಟೈಟಲ್ ಮೂಲಕ ಗಮನಸೆಳೆದಿರುವ ಚಿತ್ರ ಕ್ಲಾಂತ. ವೈಭವ್ ಪ್ರಶಾಂತ್ ನಿರ್ದೇಶನದ ಕ್ಲಾಂತ ಸಿನಿಮಾದ ಟೀಸರ್ ಈಗಾಗಲೇ ಗಮನಸೆಳೆದಿದೆ. ನಾಯಕ ವಿಘ್ನೇಶ್ ಹಾಗೂ ಸಂಗೀತ ಭಟ್ ಅಭಿನಯ ಎಲ್ಲರಿಗೂ ಮೆಚ್ಚುಗೆಯಾಗಿದೆ. ಅದರಲ್ಲೂ ವಿಘ್ನೇಶ್ ಅವರಂತೂ ಆಕ್ಷನ್ ದೃಶ್ಯಗಳಲ್ಲಿ ಎಲ್ಲರನ್ನೂ ಮೀರಿಸುವಂತೆ ಪವರ್ ಫುಲ್ […]
ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು ಯಾರೇ ಆಗಲಿ, ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು. ತಾವು ಅನುಭವಿಸಿದ ಕಷ್ಟಗಳು ಅವರು ಅನುಭವಿಸಬಾರದು… ಅಂತಾ ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಾರೆ. ಹಗಲಿರುಳೂ ಅವರ ಭವಿಷ್ಯವನ್ನೇ ಗಮನದಲ್ಲಿಟ್ಟುಕೊಂಡು ಬದುಕು ಸಾಗಿಸುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಾವೂ ಶ್ರಮಿಸುತ್ತಾರೆ. ಒಟ್ಟಾರೆ ಮಕ್ಕಳ ಬೆಳವಣಿಗೆ, ಭವಿಷ್ಯದ ವಿಚಾರದಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಈ ವರೆಗೆ ಮಕ್ಕಳ ಕುರಿತು ಸಾಕಷ್ಟು ಸಿನಿಮಾಗಳು ತಯಾರಾಗಿವೆ. ಆದರೆ, ಮಕ್ಕಳ ಬಗೆಗೆ ಈ ವರೆಗೆ ಎಲ್ಲೂ ಬಾರದ […]
ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್ ಏರಿಯಾಲ್ ಒಂದಿನ, ಹುಲಿರಾಯ ಮೊದಲಾದ ಚಿತ್ರಗಳು ಅರವಿಂದ್ ಅವರ ವಿಭಿನ್ನ ಚಿಂತನೆಗೆ ಸಾಕ್ಷಿ. ಈ ಹಿಂದೆ ಅರವಿಂದ್ ಕೌಶಿಕ್ ಆಯ್ಕೆ ಮಾಡಿಕೊಂಡಿದ್ದ ಕಲಾವಿದರು, ತಂತ್ರಜ್ಞರೆಲ್ಲಾ ಇವತ್ತಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹೀಗಾಗಿ ಇನ್ನೇನು ತೆರೆಗೆ ಬರಲು ಸಿದ್ದಗೊಂಡಿರುವ ಅವರ ʻಅರ್ದಂಬರ್ಧ ಪ್ರೇಮಕಥೆʼಯ ಬಗ್ಗೆ ಕೂತೂಹಲಗಳು ಗರಿಗೆದರಿಕೊಂಡಿವೆ. ಈ […]
ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು. ಅನೀಶ್ ತೇಜೇಶ್ವರ್, ತೇಜು ಹಾಗೂ ಶ್ರಾವ್ಯರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ […]