ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]
ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ […]
ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ತೆರೆಗೆ ಬರ್ತಿವೆ. ಅಂತಹದ್ದೇ ವಿಭಿನ್ನ ಬಗೆಯ ಟೈಟಲ್ ಮೂಲಕ ಗಮನಸೆಳೆದಿರುವ ಚಿತ್ರ ಕ್ಲಾಂತ. ವೈಭವ್ ಪ್ರಶಾಂತ್ ನಿರ್ದೇಶನದ ಕ್ಲಾಂತ ಸಿನಿಮಾದ ಟೀಸರ್ ಈಗಾಗಲೇ ಗಮನಸೆಳೆದಿದೆ. ನಾಯಕ ವಿಘ್ನೇಶ್ ಹಾಗೂ ಸಂಗೀತ ಭಟ್ ಅಭಿನಯ ಎಲ್ಲರಿಗೂ ಮೆಚ್ಚುಗೆಯಾಗಿದೆ. ಅದರಲ್ಲೂ ವಿಘ್ನೇಶ್ ಅವರಂತೂ ಆಕ್ಷನ್ ದೃಶ್ಯಗಳಲ್ಲಿ ಎಲ್ಲರನ್ನೂ ಮೀರಿಸುವಂತೆ ಪವರ್ ಫುಲ್ […]
ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು ಯಾರೇ ಆಗಲಿ, ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು. ತಾವು ಅನುಭವಿಸಿದ ಕಷ್ಟಗಳು ಅವರು ಅನುಭವಿಸಬಾರದು… ಅಂತಾ ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಾರೆ. ಹಗಲಿರುಳೂ ಅವರ ಭವಿಷ್ಯವನ್ನೇ ಗಮನದಲ್ಲಿಟ್ಟುಕೊಂಡು ಬದುಕು ಸಾಗಿಸುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಾವೂ ಶ್ರಮಿಸುತ್ತಾರೆ. ಒಟ್ಟಾರೆ ಮಕ್ಕಳ ಬೆಳವಣಿಗೆ, ಭವಿಷ್ಯದ ವಿಚಾರದಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಈ ವರೆಗೆ ಮಕ್ಕಳ ಕುರಿತು ಸಾಕಷ್ಟು ಸಿನಿಮಾಗಳು ತಯಾರಾಗಿವೆ. ಆದರೆ, ಮಕ್ಕಳ ಬಗೆಗೆ ಈ ವರೆಗೆ ಎಲ್ಲೂ ಬಾರದ […]
ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್ ಏರಿಯಾಲ್ ಒಂದಿನ, ಹುಲಿರಾಯ ಮೊದಲಾದ ಚಿತ್ರಗಳು ಅರವಿಂದ್ ಅವರ ವಿಭಿನ್ನ ಚಿಂತನೆಗೆ ಸಾಕ್ಷಿ. ಈ ಹಿಂದೆ ಅರವಿಂದ್ ಕೌಶಿಕ್ ಆಯ್ಕೆ ಮಾಡಿಕೊಂಡಿದ್ದ ಕಲಾವಿದರು, ತಂತ್ರಜ್ಞರೆಲ್ಲಾ ಇವತ್ತಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹೀಗಾಗಿ ಇನ್ನೇನು ತೆರೆಗೆ ಬರಲು ಸಿದ್ದಗೊಂಡಿರುವ ಅವರ ʻಅರ್ದಂಬರ್ಧ ಪ್ರೇಮಕಥೆʼಯ ಬಗ್ಗೆ ಕೂತೂಹಲಗಳು ಗರಿಗೆದರಿಕೊಂಡಿವೆ. ಈ […]
ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು. ಅನೀಶ್ ತೇಜೇಶ್ವರ್, ತೇಜು ಹಾಗೂ ಶ್ರಾವ್ಯರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ […]
ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವು ಹಿರಾನಿ ಡಂಕಿ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಸಾಮಾನ್ಯವಾಗಿ ರಾಜ್ ಕುಮಾರ್ ಹಿರಾನಿ ಚಿತ್ರಗಳು ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶಗಳನ್ನು ಒಳಗೊಂಡಿರುತ್ತದೆ. ಫ್ಯಾಮಿಲಿ ಕುಳಿತು ನೋಡುವ ಸಿನಿಮಾಗಳಾಗಿರುತ್ತವೆ. ಇಂತಹ ಸ್ಟಾರ್ ಡೈರೆಕ್ಟರ್ ಶಾರುಖ್ ಖಾನ್ ಗೆ ಡಂಕಿ ಎಂಬ […]
ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ […]
ಯಾವುದೇ ಸಿನಿಮಾದ ಪೋಸ್ಟರ್, ಫಸ್ಟ್ ಲುಕ್ಕುಗಳೇ ಆ ಚಿತ್ರದ ಬಗ್ಗೆ ಆರಂಭಿಕವಾಗಿ ಕುತೂಹಲ ಸೃಷ್ಟಿಸೋದು. ಈ ಹಿಂದೆ 6-5=2, ಕರ್ವ ಮೊದಲಾದ ಸಿನಿಮಾಗಳೆಲ್ಲಾ ಸೂಪರ್ ಹಿಟ್ ಆಗುವ ಮೊದಲು ಅವರು ಕೊಟ್ಟ ಕಂಟೆಂಡು ನೋಡುಗರನ್ನು ಸೆಳೆದಿತ್ತು. ಈಗ ʻಕಣಂಜಾರುʼ ಸಿನಿಮಾದ ಮೋಷನ್ ಪೋಸ್ಟರ್ ಕೂಡಾ ಸಿನಿಮಾದ ಗೆಲುವಿನ ಸೂಚನೆಯನ್ನು ನೀಡುವಂತಿದೆ. ಸದ್ದಿಲ್ಲದೇ ಶೂಟಿಂಗ್ ಇತ್ಯಾದಿ ಕೆಲಸಗಳನ್ನು ಮುಗಿಸಿಕೊಂಡು ಬಂದಿರುವ ಈ ಸಿನಿಮಾದ ಬಗ್ಗೆ ಎಲ್ಲರಲ್ಲೂ ಅಚ್ಛರಿ ಮೂಡಿದೆ. ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ […]
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ ಶಂಕರ್SRG ನಾಯಕನಾಗಿ ನಟಿಸಿರುವ ಸಿನಿಮಾ. ಈ ಚಿತ್ರಕ್ಕೆ ರಾಜ್ ಗುರು ಆಕ್ಷನ್ ಕಟ್ ಹೇಳಿದ್ದಾರೆ. ನಟ ಗೌರಿ ಶಂಕರ್ ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು. ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ […]