sarpini kannada movie snake
ನಿರೀಕ್ಷೆಗಳು ನಿಜವೇ ಆದರೆ ದಿಲ್ ಪಸಂದ್ ʻಲವ್ ಮಾಕ್ಟೇಲ್ʼ ಸರಣಿ ಸಿನಿಮಾಗಳಂತೆ ದೊಡ್ಡ ಮಟ್ಟದಲ್ಲಿ ಗೆಲ್ಲಲಿದೆ. ಮದರಂಗಿ ಕೃಷ್ಣ ಅವರನ್ನು ಹೇಗೆಲ್ಲಾ ನೋಡಲು ಜನ ಬಯಸುತ್ತಿದ್ದಾರೋ ಅಂಥಾದ್ದೇ ರೋಲಲ್ಲಿ ಕೃಷ್ಣ ಕಾಣಿಸಿಕೊಂಡಿದ್ದಾರೆ. ನಿಮಗೆಲ್ಲ ನೆನಪಿರಬೇಕು. ಇಸವಿ 2016ರಲ್ಲಿ ʻನಾನಿʼ ಹೆಸರಿನ ಸಿನಿಮಾ ಬಂದಿತ್ತು. ಪ್ರಣಾಳ ಶಿಶುವನ್ನು ಆವರಿಸಿದ್ದ ನೈಜ ಮತ್ತು ಭಯಾನಕ ಘಟನೆಯೊಂದರ ಸುತ್ತ ಹೆಣೆದಿದ್ದ ಸಿನಿಮಾವದು. ಆ ಚಿತ್ರವನ್ನು ನಿರ್ದೇಶಿಸಿದ್ದವರು ಸುಮಂತ್. ಇವರ ಮೂಲ ಹೆಸರು ರಾಘವೇಂದ್ರ ಗೊಲ್ಲಹಳ್ಳಿ. ತೀರಾ ಸಣ್ಣ ವಯಸ್ಸಿಗೇ ಚಿತ್ರ ನಿರ್ದೇಶಕನಾಗಬೇಕು […]
ಬಹುತೇಕ ಹೆಣ್ಣುಮಕ್ಕಳ ವಿವಾಹ ನಂತರದ ಬದುಕಿಗೂ ಮುಂಚಿನದಕ್ಕೂ ವ್ಯತ್ಯಾಸಗಳಿರುತ್ತವೆ. ಬದುಕಲ್ಲಿ ಸಾಧನೆ ಮಾಡಬೇಕು, ನೊಂದವರಿಗೆ ಸಹಾಯ ಹಸ್ತ ಚಾಚಬೇಕು ಅಂದುಕೊಂಡವರೆಷ್ಟೋ ಜನ ಮದುವೆ ನಂತರ ಅವರದ್ದೇ ಜಂಜಾಟಗಳು, ಹೊಸ ಬದುಕಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರಲ್ಲೇ ಮಗ್ನರಾಗಿಬಿಡುತ್ತಾರೆ. ಆದರೆ ಸುನಿತಾ ಅವರ ಸುಕೃತವೋ ಏನೋ ಅವರ ಎಲ್ಲ ಕನಸುಗಳಿಗೆ ಬೆಳಕಾಗುವಂತೆ ಪತಿ ಮಂಜುನಾಥ್ ಅವರ ಬೆನ್ನೆಲುಬಾಗಿ ನಿಂತರು. ಬದುಕಲ್ಲಿ ಕಷ್ಟ ಕಂಡವರು ಮಾತ್ರ ಮತ್ತೊಬ್ಬರ ಕಣ್ಣೀರು ಒರೆಸಲು ಸಾಧ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿರುವ ದೊಡ್ಡಬಳ್ಳಾಪುರದಲ್ಲಿ ದೊಡ್ಡರಾಯಪ್ಪನಹಳ್ಳಿ ಎನ್ನುವ ಪುಟ್ಟ […]
ಸಿನಿಮಾದ ಅಫಿಷಿಯಲ್ ಟೀಸರ್ ಈಗ ಬಿಡುಗಡೆಯಾಗಿದೆ. ನಮ್ಮೂರಿನಲ್ಲಿ ನಡೆದ ಘಟನೆಯೊಂದರ ಸುತ್ತ ನಡೆದ ವಿಚಾರವನ್ನೇ ಕಾಡುವಂತೆ ಕಟ್ಟಿದ್ದಾರೆ ಅನ್ನೋದರ ಸೂಚನೆ ಸಿಕ್ಕಿದೆ. ಅತಿರಂಜಕ ವಿಚಾರಗಳನ್ನು ತುರುಕದೇ ಹೇಳಬೇಕಾದ್ದನ್ನು ನೇರಾನೇರ ನಿರೂಪಿಸಿದ್ದಾರೆ ಅನ್ನೋದು ಟೀಸರಿನಲ್ಲೇ ಗೊತ್ತಾಗುತ್ತಿದೆ. ನೋ ಡೌಟ್! ಕನ್ನಡ ಚಿತ್ರರಂಗ ಪಥ ಬದಲಿಸುತ್ತಿದೆ. ಒಂದಕ್ಕಿಂತಾ ಒಂದು ಭಿನ್ನ ಚಿತ್ರಗಳಿಲ್ಲಿ ಜೀವಪಡೆಯುತ್ತಿವೆ. ಸಿನಿಮಾ ಅಂದರೆ ಹೀಗೇ ಇರಬೇಕು ಅಂತಾ ಅಘೋಷಿತ ಸೂತ್ರ, ಸಿದ್ದ ಚೌಕಟ್ಟಲ್ಲಿ ಒದ್ದಾಡುತ್ತಿದ್ದ ಕಾಲವೊಂದಿತ್ತು. ಅಲ್ಲಲ್ಲಿ ಕೆಲವರು ಹೊಸ ತನವನ್ನು ಪರಿಚಯಿಸುತ್ತಿದ್ದರು. ಆದರೆ ಈಗ ಕನ್ನಡ […]
ಲವ್ ಸಬ್ಜೆಕ್ಟಿನ ಸಿನಿಮಾ ಮಾಡುವವರು ತೀರಾ ಫ್ರೆಶ್ ಎನಿಸುವ ಸಂಭಾಷಣೆ ಬೇಕೆನಿಸಿದರೆ, ಹೇಗಾದರೂ ಅಜ್ಜೀಪುರದ ಈ ರವಿಯನ್ನು ಒಪ್ಪಿಸಿ ಬರೆಸಿಕೊಳ್ಳಿ. ಇವರು ರವಿ ಅಜ್ಜೀಪುರ. ಮಾಧ್ಯಮ ವಲಯದಲ್ಲಿವರು ಸದಾ ಪ್ರವಹಿಸುವ ಅಚ್ಚರಿ. ಪ್ರಿಂಟ್ ಮೀಡಿಯಾದಲ್ಲಿ ಹೆಸರು ಮಾಡುತ್ತಿದ್ದಾಗಲೇ ಸಡನ್ನಾಗಿ ಟೀವಿ ಮಾಧ್ಯಮದತ್ತ ಮುಖ ಮಾಡಿದವರು. ಅಲ್ಲಿಂದ ಮತ್ತೆ ಪತ್ರಿಕೆಯ ಕಡೆ ‘ಮನಸು’ ಕೊಟ್ಟವರು. ಪತ್ರಕರ್ತರಾಗಿದ್ದುಕೊಂಡೇ ವಿನ್ಯಾಸ ಕಲಾವಿದರಾಗಿ, ನೂರಾರು ಪುಸ್ತಕಗಳ ಮುಖಪುಟಗಳಿಗೆ ಬಣ್ಣ ತುಂಬಿದವರು. ಒಂದು ಪತ್ರಿಕೆಯ ಕಂಟೆಂಟ್ ಹೇಗಿರಬೇಕು ಅನ್ನೋದರ ಜೊತೆಗೆ ಅದರ ಪ್ರೆಸೆಂಟೇಷನ್ ಕೂಡಾ […]
ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಚಿತ್ರ ‘ಚಾಂಪಿಯನ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕ್ರೀಡಾ ಚಿತ್ರವಾಗಿದ್ದು, ಅಥ್ಲೀಟ್ ಒಬ್ಬನ ಜೀವನದ ಕುರಿತಾಗಿ ಈ ಚಿತ್ರ ಸಾಗುತ್ತದಂತೆ. ಈ ಚಿತ್ರದಲ್ಲಿ ಅಥ್ಲೀಟ್ ಆಗಿ ಸಚಿನ್ ನಟಿಸಿದ್ದಾರೆ. ಚಿತ್ರದಲ್ಲಿ ಹೀರೋ ಆಗಿ ನಟಿಸಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಸಚಿನ್ಗೆ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ ಇದ್ದರೂ, ಅದಕ್ಕಿಂತ ಹೆಚ್ಚಾಗಿ ಆರ್ಮಿಗೆ ಸೇರಿ ದೇಶಸೇವೆ ಮಾಡಬೇಕು ಎಂದು ಮನಸ್ಸಿತ್ತಂತೆ. ಅದು ಸಾಧ್ಯವಾಗದಿದ್ದರಿಂದ, ಅವರು ಈ ಕಡೆ […]
“ನನಗೇನಾದರೂ ಹೆಚ್ಚು ದುಡ್ಡು ಸಿಕ್ಕರೆ, ನಿನ್ನನ್ನು ಹೀರೋ ಮಾಡಿ ಒಂದು ಚಿತ್ರ ಮಾಡುತ್ತೇನೆ … ಎಂದು ಹೇಳಿದ್ದರಂತೆ ಶಿವಾನಂದ್ ಎಸ್. ನೀಲಣ್ಣನವರ್. ಅದರಂತೆ ಅವರು ನಡೆದುಕೊಂಡಿದ್ದು, ತಮ್ಮ ಸ್ನೇಹಿತನನ್ನು ಹೀರೋ ಆಗಿ ಮಾಡಿ ಒಂದು ಚಿತ್ರ ಮಾಡಿ ಮುಗಿಸಿದ್ದಾರೆ. ಈಗ ಆ ಚಿತ್ರ ಅಕ್ಟೋಬರ್ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಾಂಪಿಯನ್ ಕೋವಿಡ್ಗೂ ಮೊದಲೇ ಪ್ರಾರಂಭವಾದ ಚಿತ್ರ. ದಿವಂಗತ ನಿರ್ದೇಶಕ ಡಿ. ರಾಜೇಂದ್ರ ಬಾಬು ಅವರ ಮೆಚ್ಚಿನ ಅಸೋಸಿಯೇಟ್ ಆಗಿದ್ದ ಶಾಹುರಾಜ್ ಶಿಂಧೆ ನಿರ್ದೇಶನದ ಚಿತ್ರ. ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾದ ಈ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿರುವಾಗ […]
ಜೈದ್ ಖಾನ್ ಇತ್ತೀಚೆಗೆ ಹೆಚ್ಚು ಪ್ರಚಾರದಲ್ಲಿರುವ ಹೆಸರು. ಅಪ್ಪ ಕರ್ನಾಟಕ ರಾಜ್ಯ ರಾಜಕಾರಣದ ವರ್ಣರಂಜಿತ ವ್ಯಕ್ತಿ. ಕೂತರೂ ನಿಂತರೂ ಸುದ್ದಿಯಾಗುವ ಉದ್ಯಮಿ. ಇಂಥರವ ಮಗ ಸಿನಿಮಾರಂಗಕ್ಕೆ ಬಂದಾಗ ಜನ ತಲೆಗೊಂದು ಮಾತಾಡಿದ್ದರು. ಯಾವಾಗ ಜೈದ್ ನಟನೆಯ ಮೊದಲ ಸಿನಿಮಾ ʻಬನಾರಸ್ʼ ಚಿತ್ರದ ʻಮಾಯ ಗಂಗೆʼ ಹಾಡು ಲೋಕಾರ್ಪಣೆಯಾಯಿತೋ? ಆಗ ಅಂದವರ ಅಂಡು ಸದ್ದು ನಿಲ್ಲಿಸಿತು. ʻಹುಡುಗ ಸಿನಿಮಾರಂಗದಲ್ಲಿ ಭದ್ರವಾಗಿ ನಿಲ್ಲೋದು ಗ್ಯಾರೆಂಟಿʼ ಅಂತಾ ಒಳಗೊಳಗೇ ಮಾತಾಡಿಕೊಂಡರು. ಅಪ್ಪನ ರಾಜಕಾರಣದ ವರ್ಚಸ್ಸು, ವ್ಯವಹಾರ, ಶ್ರೀಮಂತಿಕೆ – ಇವೆಲ್ಲದರ ಹೊರತಾಗಿ […]
ಭಾರತೀಯ ಚಿತ್ರರಂಗದಲ್ಲಿ ತಮಿಳು ನಟ ವಿಜಯ್ ಸೇತುಪತಿ ಬಿಟ್ಟರೆ ಬಹುಶಃ ಅತೀ ಹೆಚ್ಚು ಬ್ಯುಸೀ ಇರುವ ನಟ ಅಂದರೆ ಅದು ಡಾಲಿ ಧನಂಜಯ ಇರಬೇಕು! ಅದ್ಯಾವ ಘಳಿಗೆಯಲ್ಲಿ ದುನಿಯಾ ಸೂರಿ ಟಗರು ಅನ್ನೋ ಸಿನಿಮಾಗೆ ʻಡಾಲಿʼ ಎನ್ನುವ ಪಾತ್ರವನ್ನು ಬರೆದರೋ? ಅದಕ್ಕೆ ಧನಂಜಯಾನೇ ಬೇಕು ಅಂತಾ ಚಾಯ್ಸ್ ಮಾಡಿದರೋ ಗೊತ್ತಿಲ್ಲ. ನುಗ್ಗಿಬಂದ ʻಟಗರುʼ ಜೊತೆ ಡಾಲಿಯ ನಸೀಬೇ ಬದಲಾಗಿಹೋಯ್ತು. ಕನ್ನಡ ಮಾತ್ರವಲ್ಲದೆ, ನೆರೆಯ ತಮಿಳು, ತೆಲುಗು ಚಿತ್ರರಂಗದಿಂದಲೂ ಅವಕಾಶಗಳು ಅರಸಿಬಂದವು. ಟಗರು ಬರುವ ಮುಂಚೆ ಇದೇ ಧನಂಜಯ […]