ಈ ಬಾರಿಯ ವಿಧಾನಸಭಾ ಚುನಾವಣೆಗೆ ಸುದೀಪ್ ಅವರನ್ನು ರಾಜ್ಯಾದ್ಯಂತ ಸ್ಟಾರ್ ಪ್ರಾಚಾರಕನನ್ನಾಗಿಸುವ ಪ್ಲಾನ್ ಬಿಜೆಪಿಯದ್ದು. ಎಲ್ಲವೂ ನಾಳೆ ಮಧ್ಯಾಹ್ನ1.30ಕ್ಕೆ ನಡೆಯಲಿರುವ ಪ್ರೆಸ್ ಮೀಟ್ ನಲ್ಲಿ ಬಯಲಾಗಲಿದೆ ಕಿಚ್ಚ ಸುದೀಪ ರಾಜಕಾರಣಕ್ಕೆ ಬರ್ತಾರಂತೆ… ಕಳೆದ ಹದಿನೈದು ವರ್ಷಗಳಲ್ಲಿ ಪ್ರತೀ ಸಲ ಚುನಾವಣೆ ಬಂದಾಗಲೂ ಇಂಥದ್ದೊಂದು ಸುದ್ದಿ ಸರಸರನೆ ಹರಿದಾಡುತ್ತದೆ. ಅದು ಹಾಗೇ ತಣ್ಣಗಾಗುತ್ತದೆ. ಸುದೀಪ್ ಅವರನ್ನು ರಾಜಕೀಯದ ಪಡಸಾಲೆಗೆ ಎಳೆದುತರಲು ಎಲ್ಲ ಪ್ರಮುಖ ಪಕ್ಷಗಳೂ ಕರಸತ್ತು ನಡೆಸಿವೆ ಅನ್ನೋದಂತೂ ನಿಜ. ಆದರೆ ಸುದೀಪ್ ಯಾವತ್ತೂ ಅಧಿಕೃತವಾಗಿ ಈ ಬಗ್ಗೆ […]
ಕುರಿ ಪ್ರತಾಪ ಅನ್ನೋ ಹೆಸರಿನ ಕಾಮಿಡಿ ನಟ ಒಬ್ಬ ಇದ್ದಾನಲ್ಲಾ? ಒಂದು ಕಾಲದಲ್ಲಿ ʻಕುರಿಗಳು ಸಾರ್ ಕುರಿಗಳುʼ ಎನ್ನುವ ಪ್ರಾಂಕ್ ಶೋದಿಂದ ಸಿಕ್ಕಾಪಟ್ಟೆ ಫೇಮಸ್ಸಾಗಿದ್ದವನು ಈತ. ಆ ಕಾರ್ಯಕ್ರಮದ ಮೂಲಕವೇ ಒಂದಿಷ್ಟು ಮಂದಿ ಸಿನಿಮಾದವರನ್ನು ಪರಿಚಯ ಮಾಡಿಕೊಂಡು, ಛಾನ್ಸು ಗಿಟ್ಟಿಸಿಕೊಂಡ. ಅದೇ ಹೊತ್ತಿಗೆ ಸಾಧು ಕೋಕಿಲನ ಹಾವಳಿ ಮಿತಿ ಮೀರಿ ಹೋಗಿತ್ತು. ಸಿನಿಮಾವೊಂದರಲ್ಲಿ ನಟಿಸಲು ಈತ ಲಕ್ಷಾಂತರ ರುಪಾಯಿ ಪ್ಯಾಕೇಜ್ ಡೀಲ್ ಮಾಡುತ್ತಿದ್ದರು. ಕಾಸು ಕೊಟ್ಟರೂ ಕೈಗೆ ಸಿಗದೆ ಆಟವಾಡಿಸುತ್ತಿದ್ದರು. ಪೇಮೆಂಟು ಈಸಿಕೊಂಡು ಸೀದಾ ಗೋವಾ, ಮಲೇಶಿಯಾ […]