ಕಿರುಚಿತ್ರವೊಂದು ಸಿನಿಮಾದ ಮಟ್ಟಕ್ಕೆ ಟಾಕ್ ಕ್ರಿಯೇಟ್ ಮಾಡೋದು ಸಲೀಸಲ್ಲ. ಸದ್ಯ ಕನ್ನಡ ಚಿತ್ರರಂಗದಲ್ಲಿ ಎಲ್ಲರ ಗಮನ ಸೆಳೆದಿರುವ ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’ ಕಿರುಚಿತ್ರ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಸಮಾರಂಭವೊಂದರಲ್ಲಿ, ಸಂಗಮ್ ಟಾಕೀಸ್ ಯೂ ಟ್ಯೂಬ್ ಚಾನೆಲ್ ಮೂಲಕ ಲೋಕಾರ್ಪಣೆಗೊಂಡಿರುವ ಜೀವಸಖಿ, ಮೊದಲಿಗೆ ಅಲ್ಲಿದ್ದ ಪ್ರೇಕ್ಷಕ ವರ್ಗವನ್ನು ಸೆಳೆದುಕೊಂಡಿತ್ತು. ಜೀವಸಖಿಯನ್ನು ನೋಡಿದವರೆಲ್ಲರೂ ಮೆಚ್ಚುಗೆಯ ಮಾತಾಡಿದ್ದರು. ಈಗ ಸೋಷಿಯಲ್ ಮೀಡಿಯಾದ ತುಂಬಾ ಈ ಪುಟ್ಟ ಸಿನಿಮಾಗೆ ಪ್ರೋತ್ಸಾಹದಾಯಕ ವಾತಾವರಣ ನಿರ್ಮಾಣವಾಗಿದೆ. ಚೆಂದದ ಪ್ರೇಮದ ಪುಳಕಗಳನ್ನು ಒಳಗೊಂಡಿರುವ ಕಿರುಚಿತ್ರ ಜೀವಸಖಿ. […]
‘ ನಾನು ಕೋ ಕೋ ಕೋಳಿಕ್ಕೆ ರಂಗ…’ ಬಹುಶಃ ಈ ಹಾಡನ್ನು ಕೇಳದವರೇ ಇಲ್ಲ. ಈ ಹಾಡು ಇಂದಿಗೂ ಎವರ್ ಗ್ರೀನ್. ಇಷ್ಟಕ್ಕೂ ಈ ಹಾಡಿನ ಬಗ್ಗೆ ಹೇಳೋಕೆ ಕಾರಣ ‘ ನಾ ಕೋಳಿಕ್ಕೆರಂಗ’ ಸಿನಿಮಾ. ಹೌದು, ಮಾಸ್ಟರ್ ಆನಂದ್ ಈ ಸಿನಿಮಾದ ಹೀರೋ. ಇದೊಂದು ಹಳ್ಳಿ ಕಥೆ. ಸಿನಿಮಾದ ಶೀರ್ಷಿಕೆ ಹೇಳುವಂತೆ, ಕೋಳಿ ಹಾಗು ರಂಗನ ಕಥೆ. ಅದೊಂದು ಅಪರೂಪದ ಭಾವ ಸಂಗಮ. ಈ ಚಿತ್ರ ಈಗ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 10 ರಂದು […]
ವಿಭಿನ್ನ ಹೆಸರಿನ ಮೂಲಕ ಗಮನ ಸೆಳೆಯುತ್ತಿರುವ ಕ್ಲಾಂತ ಸಿನಿಮಾದ ಟೀಸರ್ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ಭಟ್ ಕಂಬ್ಯಾಕ್ ಚಿತ್ರ ಇದಾಗಿದ್ದು, ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಟೀಸರ್ ಮೂಡಿ ಬಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಕ್ಲಾಂತ ಟೀಸರ್ ಇದ್ದು , ಸಂಗೀತ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ […]
– ಇಂಡಸ್ ಹರ್ಬ್ಸ್ ನ ಟಿ ಸಿ ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದ್ದು ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೇ ಚಿತ್ರ ತೇರ್ಗಡೆ ಹೊಂದಿದೆ. ಇದೇ ಅಕ್ಟೋಬರ್ 13 ರ ಶುಕ್ರವಾರ ಜಲಪಾತ ಚಿತ್ರವು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಹೆಸರಾಂತ ನಟ ಪ್ರಮೋದ್ ಶೆಟ್ಟಿ ಅವರು ಅತ್ಯಂತ ವಿಭಿನ್ನ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಪದವಿಪೂರ್ವ ಖ್ಯಾತಿಯ ರಜನೀಶ್ ಪೂರ್ಣ ಪ್ರಮಾಣದ ನಾಯಕನಾಗಿ […]
ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ, ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ “ಇನಾಮ್ದಾರ್ ” ಚಿತ್ರದ ಟ್ರೇಲರ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಯಿತು. ನಿರಂಜನ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಉದ್ಯಮಿ ಕರುಣಾಕರ್ ರೆಡ್ಡಿ, ಎಂ.ಕೆ.ಮಠ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ “ಇನಾಮ್ದಾರ್” ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ […]
ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ ಅಖಾಡ” ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ […]
ಕನ್ನಡದ ಬಹುತೇಕ ಕಲಾವಿದರು ನಟಿಸಿರುವುದು ಹಾಗೂ ಬೆಂಗಳೂರಿ ನಲ್ಲೆ 90% ಭಾಗದಷ್ಟು ಶೂಟಿಂಗ್ ನಡೆದಿದೆ ಇನ್ನು ವಿಶೇಷ ವೆಂದರೆ ಕನ್ನಡದ ಸಂಭಾಷಣೆ ಕೂಡ ಈ ಚಿತ್ರದಲ್ಲಿ ಬಳಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರಗಳನ್ನು ಹಂಚಿಕೊಂಡಿತು. ಚಿತ್ರದ ನಿರ್ದೇಶಕ ಲಕ್ಷ್ಮಣ್ ಚಿನ್ನ ಮಾತನಾಡಿ, ಚಿತ್ರ ತೆರೆಗೆ ಬರಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಈ ಚಿತ್ರ ಬಹುತೇಕ ಚಿತ್ರಿಕರಣ ಬೆಂಗಳೂರಿನಲ್ಲೆ ಆಗಿದೆ. ನಾವು ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವುದಾಗಿ ಅವರು ಹೇಳಿದರು. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡತಿ […]
ಭೀಮ ಸೆಟ್ಟೇರಿದಾನಿಂದ್ಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟಿಸಿರೋ ಸಿನಿಮಾ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್. ಸಲಗದಂತಹ ಬ್ಲಾಕ್ ಬಸ್ಟರ್ ಕೊಟ್ಮೇಲೆ ದುನಿಯಾ ವಿಜಯ್ ಮತ್ತೆ ಆಕ್ಷನ್ ಕಟ್ ಹೇಳೋದ್ರೊಂದಿಗೆ ಲೀಡ್ ರೋಲ್ ಪ್ಲೇ ಮಾಡಿರೋ ಸಿನಿಮಾ. ಪ್ರಚಂಡ ಪ್ರತಿಭಾವಂತರ ದಂಡುಕಟ್ಟಿಕೊಂಡು ವಿಜಯ್ ಈ ಸಲ ಮತ್ತೊಂದು ಔಟ್ ಅಂಡ್ ಔಟ್ ಎಂಟ್ರಟೈನ್ಮೆಂಟ್ ಪ್ಯಾಕೇಜ್ ಮಾಡಿದ್ದಾರೆ.ಕೃಷ್ಣ ಸಾರ್ಥಕ್, ಜಗದೀಶ್ ಗೌಡ […]
ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಎಂಬ ಅಸ್ತ್ರವನ್ನುಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂಬುದನ್ನು ನಾಗರಾಜ್ ಎಂ.ಜಿ.ಗೌಡ ಅವರು ಕಾನೂನು ಅಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಪುಟ್ಟೇಗೌಡ. ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರೇ ಕಥೆ, ಸಂಭಾಷಣೆ ಬರೆದು ಚಿತ್ರನಿರ್ಮಾಣ ಮಾಡುವ ಜೊತೆಗೆ ಚಿತ್ರದ ಮುಖ್ಯ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಆಡಿಯೋ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಕಾಮಾಕ್ಷಿ ಪಾಳ್ಯದ ಕೆರೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಕುಣಿಗಲ್ ಬಿಜೆಪಿ ಮುಖಂಡ […]
ಜಯಸೂರ್ಯ, ಪಿ.ಆರ್.ಓ. ರೂರಲ್ ಸ್ಟಾರ್ ಅಂಜನ್ ನಾಯಕನಾಗಿ ನಟಿಸಿರುವ `ಚೋಳ’ ಚಿತ್ರ ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರ ಗಮನ ಸೆಳೆದುಕೊಂಡಿತ್ತು. ಸುರೇಶ್ ಡಿ.ಎಂ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಭಿನ್ನವಾದ ಕಥಾನಕವನ್ನು ಒಳಗೊಂಡಿದೆ. ಈಗ ಚೋಳ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ. ರೂರಲ್ ಸ್ಟಾರ್ ಅಂಜನ್ ಔಟ್ ಅಂಡ್ ಔಟ್ ಮಾಸ್ ಲುಕ್ಕಿನಲ್ಲಿ ಅಬ್ಬರಿಸಿದ್ದಾರೆ. ಇದರೊಂದಿಗೆ ಈ ಚಿತ್ರದ ಮೇಕಿಂಗ್, ಕಥೆ, ಪಾತ್ರವರ್ಗ ಸೇರಿದಂತೆ ಎಲ್ಲ ವಿಚಾರಗಳಲ್ಲೂ ಗಮನ ಸೆಳೆದಿದೆ. ಇದರೊಂದಿಗೆ ನಿರ್ದೇಶಕರಾಗಿ ರೂಪಾಂತರಗೊಂಡಿರುವ ಸುರೇಶ್ ಡಿ.ಎಂ ಮೊದಲ […]