ಮೊನ್ನೆ ತಾನೆ ಎಲೆಕ್ಷನ್ ಮುಗಿದು ರಿಸಲ್ಟೂ ಹೊರಬಂದಿದೆ. ಈ ಸಲದ ಚುನಾವಣೆಯಲ್ಲಿ ಸಾಕಷ್ಟು ನಟ-ನಟಿಯರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ʻಇವರು ನನ್ನ ಆತ್ಮೀಯರು. ಅದಕ್ಕಾಗಿ ಪ್ರಚಾರ ಮಾಡುತ್ತಿದ್ದೇನೆʼ ಅಂತಾ ಬಾಯಿಮಾತಿಗೆ ಹೇಳಿಕೊಂಡಿದ್ದಾರಾದರೂ, ಬಹುತೇಕರು ದಿನದ ಪೇಮೆಂಟು ಪಡೆದು ಕ್ಯಾನ್ವಾಸ್ ಮಾಡಿ ಬಂದವರೇ! ನಟ, ನಿರ್ದೇಶಕ, ಸಿನಿಮಾರಂಗದಲ್ಲಿ ಒಂದು ಪೀಳಿಗೆಗೆ ಗಾಡ್ ಫಾದರ್ ಅನ್ನಿಸಿಕೊಂಡಿರುವವರು ರಿಯಲ್ ಸ್ಟಾರ್ ಉಪೇಂದ್ರ. ಸಿನಿಮಾವಲಯದಲ್ಲಿ ಎಲ್ಲರೊಂದಿಗೂ ಆತ್ಮೀಯತೆಯಿಂದ ಬೆರೆಯುವವರು. ಹಾಗೇನಾದರೂ ಸ್ನೇಹ, ಪ್ರೀತಿ, ವಿಶ್ವಾಸಕ್ಕೆ ಕಟ್ಟುಬಿದ್ದು ಪ್ರಚಾರಕ್ಕೆ ಹೋಗುವುದಿದ್ದರೆ, ಉಪೇಂದ್ರನ ಪ್ರಜಾಕೀಯಕ್ಕೇ ಎಲ್ಲರೂ […]
ಸಂಗೀತ ನಿರ್ದೇಶಕರಾಗಿ ವಿಪರೀತ ಅವಕಾಶ ಹೊಂದಿದ್ದವರು ವಿ. ಹರಿಕೃಷ್ಣ. ‘ಎಲ್ಲ ಬಿಟ್ಟ ಬಂಗಿ ನೆಟ್ಟ’ ಅನ್ನೋ ಮಾತಿದೆಯಲ್ಲಾ? ಹಾಗೆ ಹರಿಕೃಷ್ಣಂಗೆ ಡೈರೆಕ್ಟರ್ ಆಗಬೇಕು ಅನ್ನೋ ಹುಚ್ಚು ಅದ್ಯಾವ ಘಳಿಗೆಯಲ್ಲಿ ತಲೆಗೇರಿತೋ ಗೊತ್ತಿಲ್ಲ. ಮೊದಲು ನಿರ್ದೇಶಿಸಿದ್ದ ಅರ್ಧ ಸಿನಿಮಾ ಒಂದು ಮಟ್ಟಕ್ಕೆ ನಿರೀಕ್ಷೆ ಹುಟ್ಟಿಸಿತ್ತು. ಆ ನಂತರದ ಬಂದ ಸಿನಿಮಾವಂತೂ ಹರಿ ಮೇಲಿದ್ದ ನಂಬಿಕೆಯನ್ನು ನೀರಲ್ಲಿ ಹೋಮ ಮಾಡಿಸಿದೆ. ಈಗ ಹರಿಗೆ ಎರಡನೇ ಸಲ ಹುಚ್ಚು ಕೆದರಿಕೊಂಡಿತ್ತು. ಆದರೆ ನಿರ್ದೇಶಕನ ಸ್ಥಾನಕ್ಕೀತ ಅನ್ ಫಿಟ್ ಅನ್ನೋದು ಕೂಡಾ ಜಾಹೀರಾಗಿದೆ. […]
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಪ್ರೀತಿಯ ಮತಬಾಂಧವರಿಗೆ ನಿಮ್ಮ ಮನೆ ಮಗ ಹೆಚ್.ಪಿ ರಾಜಗೋಪಾಲ ರೆಡ್ಡಿ ಮಾಡುವ ನಮಸ್ಕಾರಗಳು. ಇದೇ ವಿಧಾನಸಭಾ ಕ್ಷೇತ್ರದಲ್ಲಿ ಹುಟ್ಟಿ, ಬೆಳೆದ ನಾನು ನನ್ನ ಕ್ಷೇತ್ರದ ಜನರಿಗೆ ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ, ಯಾವುದೇ ಸ್ವಾರ್ಥ ವಿಲ್ಲದೆ, ಇಲ್ಲಿಯವರೆಗೂ ನನ್ನ ಕೈಲಾದಷ್ಟು ಸಹಾಯ ಮಾಡುತ್ತಾ ಬಂದಿದ್ದೇನೆ. ಬಡವರಿಗೆ, ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಹಾಗೂ ನನ್ನ ಕ್ಷೇತ್ರದಲ್ಲಿ ಇರುವ ಎಲ್ಲಾ ಅಶಕ್ತ ಜನರಿಗೆ ಇನ್ನು ಹೆಚ್ಚು ಹೆಚ್ಚು ಸೇವೆಗಳನ್ನು ಮಾಡಬೇಕೆನ್ನುವುದು ನನ್ನ ಮಹಾಭಿಲಾಷೆ. […]
ಇಡೀ ಭಾರತದಲ್ಲೇ ಬೆಂಗಳೂರು ಗಾರ್ಡನ್ ಸಿಟಿ ಎಂದು ಹೆಸರು ಪಡೆದಿದೆ. ಇದು ಟೆಕ್ನಾಲಜಿ ಹಬ್ ಎನ್ನುವ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಸ್ಟಾರ್ಟಪ್ ಮತ್ತು ತಂತ್ರಜ್ಞಾನ ಆಧಾರಿತ ಕಂಪನಿಗಳ ಪ್ರಧಾನ ಕಛೇರಿಗಳು ಇಲ್ಲಿ ತಲೆಯೆತ್ತಿವೆ. ಬೆಂಗಳೂರು ತನ್ನ ಕಾಸ್ಮೋಪಾಲಿಟನ್ ಸಂಸ್ಕೃತಿಯಿಂದಾಗಿ ಫ್ಯಾಷನ್ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ. ಸದ್ಯ ಈ ಬೇಸಿಗೆಯಲ್ಲಿ ತಮ್ಮ ಶಾಪಿಂಗ್ ಮಾಡಲು ರಿಯಾಯಿತಿ ಮತ್ತು ಕಡಿಮೆ ಮೌಲ್ಯದ ವಸ್ತುಗಳನ್ನು ಹುಡುಕುತ್ತಿರುವವರಿಗೆ TV9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್ಪೋ ಅತ್ಯುತ್ತಮ ವೇದಿಕೆಯಾಗಿದೆ. […]
ಗಾಲಿ ಜನಾರ್ಧನರೆಡ್ಡಿ ಮಗ ಕಿರೀಟಿ ನಟಿಸುತ್ತಿರುವ ಜೂನಿಯರ್ ಚಿತ್ರದ ಚಿತ್ರೀಕರಣ ಪ್ಲಾನಿನಂತೇ ಸಾಗುತ್ತಿದೆ. ಈ ಚಿತ್ರಕ್ಕಾಗಿ ಕನ್ನಂಬಾಡಿ ಬಳಿಯ ಚಿಕ್ಕರಾಯಹಳ್ಳಿಯನ್ನು ವಿಜಯನಗರವನ್ನಾಗಿ ಮಾರ್ಪಡಿಸುತ್ತಿದ್ದಾರೆ. ಇಡೀ ಹಳ್ಳಿಯಲ್ಲಿ ಒಮ್ಮೆ ತಿರುಗಿದರೆ, ಯಾವುದು ನಿಜವಾದ ಮನೆ, ಯಾವುದು ಸೆಟ್ ಅಂತಲೇ ಗೊತ್ತಾಗುವುದಿಲ್ಲ. ಆಮಟ್ಟಿಗೆ ಖರ್ಚು ಮಾಡಿ ಹಳೆಯ ಗ್ರಾಮವನ್ನಾಗಿ ಪರಿವರ್ತಿಸಿದ್ದಾರೆ. ಬಾಹುಬಲಿ ಚಿತ್ರಕ್ಕೆ ಕಲಾನಿರ್ದೇಶನ ಮಾಡಿರುವ ಮನು ಜಗಧ್ ಈ ಸಿನಿಮಾಗೂ ಆರ್ಟ್ ಡೈರೆಕ್ಷನ್ ಮಾಡುತ್ತಿದ್ದಾರೆ. ಬರಿಯ ತೊಟ್ಟಿಮನೆ ನಿರ್ಮಾಣಕ್ಕೆ ಏನಿಲ್ಲವೆಂದರೂ ಕೋಟಿ ರುಪಾಯಿ ವ್ಯಯಿಸಿದ್ದಾರೆ. ಈ ಹಳ್ಳಿಯಲ್ಲಿ ಕನ್ನಡ […]
ಕುರಿ ಪ್ರತಾಪ ಅನ್ನೋ ಹೆಸರಿನ ಕಾಮಿಡಿ ನಟ ಒಬ್ಬ ಇದ್ದಾನಲ್ಲಾ? ಒಂದು ಕಾಲದಲ್ಲಿ ʻಕುರಿಗಳು ಸಾರ್ ಕುರಿಗಳುʼ ಎನ್ನುವ ಪ್ರಾಂಕ್ ಶೋದಿಂದ ಸಿಕ್ಕಾಪಟ್ಟೆ ಫೇಮಸ್ಸಾಗಿದ್ದವನು ಈತ. ಆ ಕಾರ್ಯಕ್ರಮದ ಮೂಲಕವೇ ಒಂದಿಷ್ಟು ಮಂದಿ ಸಿನಿಮಾದವರನ್ನು ಪರಿಚಯ ಮಾಡಿಕೊಂಡು, ಛಾನ್ಸು ಗಿಟ್ಟಿಸಿಕೊಂಡ. ಅದೇ ಹೊತ್ತಿಗೆ ಸಾಧು ಕೋಕಿಲನ ಹಾವಳಿ ಮಿತಿ ಮೀರಿ ಹೋಗಿತ್ತು. ಸಿನಿಮಾವೊಂದರಲ್ಲಿ ನಟಿಸಲು ಈತ ಲಕ್ಷಾಂತರ ರುಪಾಯಿ ಪ್ಯಾಕೇಜ್ ಡೀಲ್ ಮಾಡುತ್ತಿದ್ದರು. ಕಾಸು ಕೊಟ್ಟರೂ ಕೈಗೆ ಸಿಗದೆ ಆಟವಾಡಿಸುತ್ತಿದ್ದರು. ಪೇಮೆಂಟು ಈಸಿಕೊಂಡು ಸೀದಾ ಗೋವಾ, ಮಲೇಶಿಯಾ […]
Swipe right
ಸ್ವೈಪ್ ರೈಟ್
ಸಿನಿಮಾದ ಅಫಿಷಿಯಲ್ ಟೀಸರ್ ಈಗ ಬಿಡುಗಡೆಯಾಗಿದೆ. ನಮ್ಮೂರಿನಲ್ಲಿ ನಡೆದ ಘಟನೆಯೊಂದರ ಸುತ್ತ ನಡೆದ ವಿಚಾರವನ್ನೇ ಕಾಡುವಂತೆ ಕಟ್ಟಿದ್ದಾರೆ ಅನ್ನೋದರ ಸೂಚನೆ ಸಿಕ್ಕಿದೆ. ಅತಿರಂಜಕ ವಿಚಾರಗಳನ್ನು ತುರುಕದೇ ಹೇಳಬೇಕಾದ್ದನ್ನು ನೇರಾನೇರ ನಿರೂಪಿಸಿದ್ದಾರೆ ಅನ್ನೋದು ಟೀಸರಿನಲ್ಲೇ ಗೊತ್ತಾಗುತ್ತಿದೆ. ನೋ ಡೌಟ್! ಕನ್ನಡ ಚಿತ್ರರಂಗ ಪಥ ಬದಲಿಸುತ್ತಿದೆ. ಒಂದಕ್ಕಿಂತಾ ಒಂದು ಭಿನ್ನ ಚಿತ್ರಗಳಿಲ್ಲಿ ಜೀವಪಡೆಯುತ್ತಿವೆ. ಸಿನಿಮಾ ಅಂದರೆ ಹೀಗೇ ಇರಬೇಕು ಅಂತಾ ಅಘೋಷಿತ ಸೂತ್ರ, ಸಿದ್ದ ಚೌಕಟ್ಟಲ್ಲಿ ಒದ್ದಾಡುತ್ತಿದ್ದ ಕಾಲವೊಂದಿತ್ತು. ಅಲ್ಲಲ್ಲಿ ಕೆಲವರು ಹೊಸ ತನವನ್ನು ಪರಿಚಯಿಸುತ್ತಿದ್ದರು. ಆದರೆ ಈಗ ಕನ್ನಡ […]
ಲವ್ ಸಬ್ಜೆಕ್ಟಿನ ಸಿನಿಮಾ ಮಾಡುವವರು ತೀರಾ ಫ್ರೆಶ್ ಎನಿಸುವ ಸಂಭಾಷಣೆ ಬೇಕೆನಿಸಿದರೆ, ಹೇಗಾದರೂ ಅಜ್ಜೀಪುರದ ಈ ರವಿಯನ್ನು ಒಪ್ಪಿಸಿ ಬರೆಸಿಕೊಳ್ಳಿ. ಇವರು ರವಿ ಅಜ್ಜೀಪುರ. ಮಾಧ್ಯಮ ವಲಯದಲ್ಲಿವರು ಸದಾ ಪ್ರವಹಿಸುವ ಅಚ್ಚರಿ. ಪ್ರಿಂಟ್ ಮೀಡಿಯಾದಲ್ಲಿ ಹೆಸರು ಮಾಡುತ್ತಿದ್ದಾಗಲೇ ಸಡನ್ನಾಗಿ ಟೀವಿ ಮಾಧ್ಯಮದತ್ತ ಮುಖ ಮಾಡಿದವರು. ಅಲ್ಲಿಂದ ಮತ್ತೆ ಪತ್ರಿಕೆಯ ಕಡೆ ‘ಮನಸು’ ಕೊಟ್ಟವರು. ಪತ್ರಕರ್ತರಾಗಿದ್ದುಕೊಂಡೇ ವಿನ್ಯಾಸ ಕಲಾವಿದರಾಗಿ, ನೂರಾರು ಪುಸ್ತಕಗಳ ಮುಖಪುಟಗಳಿಗೆ ಬಣ್ಣ ತುಂಬಿದವರು. ಒಂದು ಪತ್ರಿಕೆಯ ಕಂಟೆಂಟ್ ಹೇಗಿರಬೇಕು ಅನ್ನೋದರ ಜೊತೆಗೆ ಅದರ ಪ್ರೆಸೆಂಟೇಷನ್ ಕೂಡಾ […]
ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಚಿತ್ರ ‘ಚಾಂಪಿಯನ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕ್ರೀಡಾ ಚಿತ್ರವಾಗಿದ್ದು, ಅಥ್ಲೀಟ್ ಒಬ್ಬನ ಜೀವನದ ಕುರಿತಾಗಿ ಈ ಚಿತ್ರ ಸಾಗುತ್ತದಂತೆ. ಈ ಚಿತ್ರದಲ್ಲಿ ಅಥ್ಲೀಟ್ ಆಗಿ ಸಚಿನ್ ನಟಿಸಿದ್ದಾರೆ. ಚಿತ್ರದಲ್ಲಿ ಹೀರೋ ಆಗಿ ನಟಿಸಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಸಚಿನ್ಗೆ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ ಇದ್ದರೂ, ಅದಕ್ಕಿಂತ ಹೆಚ್ಚಾಗಿ ಆರ್ಮಿಗೆ ಸೇರಿ ದೇಶಸೇವೆ ಮಾಡಬೇಕು ಎಂದು ಮನಸ್ಸಿತ್ತಂತೆ. ಅದು ಸಾಧ್ಯವಾಗದಿದ್ದರಿಂದ, ಅವರು ಈ ಕಡೆ […]