“ಮಾಂಕ್ ದಿ ಯಂಗ್” ಚಿತ್ರದ “ಮಾಯೆ” ಹಾಡು ಬಿಡುಗಡೆ .
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿಯಲ್ಲಿ ತೆರೆಗೆ . .* ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರದಿಂದ “ಮಾಯೆ” ಎಂಬ ಮನಮೋಹಕ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರತಾಪ್ ಭಟ್ ಬರೆದಿರುವ ಈ ಹಾಡನ್ನು ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಸಂಗೀತ ನೀಡಿದ್ದಾರೆ. “ಮಾಯೆ” ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಎನ್ ಜಿ ಓ ಉಷಾ ಅವರು […]
ಬಿಡುಗಡೆಯಾಯಿತು “ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು .
ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಅವರು ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. RAP ಶೈಲಿಯಲ್ಲಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. […]
“ಸಿಂಪಲ್ ಕ್ವೀನ್” ಶ್ವೇತಾ ಶ್ರೀವಾಸ್ತವ್ ಈಗ ಲೇಖಕಿ ..
2006 ರಲ್ಲಿ “ಮುಖಾ ಮುಖಿ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಟಿ ಶ್ವೇತಾ ಶ್ರೀವಾಸ್ತವ್, “ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ”, ” ಕಿರೂಗೂರಿನ ಗಯ್ಯಾಳಿಗಳು”, “ರಾಘವೇಂದ್ರ ಸ್ಟೋರ್ಸ್”, ” ಹೋಪ್” ಮುಂತಾದ ಚಿತ್ರಗಳ ಮೂಲಕ ಕನ್ನಡಿಗರ ಮನ ಗೆದ್ದರು. ನಟಿಯಾಗಿ ಪರಿಚಿತರಾಗಿರುವ ಶ್ವೇತಾ ಶ್ರೀವಾಸ್ತವ್ ಈಗ ಲೇಖಕಿಯಾಗಿದ್ದಾರೆ. ಎರಡು ದಶಕಗಳ ತಮ್ಮ ಸಿನಿಮಾ ಜರ್ನಿಯ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದಾರೆ. ಈ ಪುಸ್ತಕಕ್ಕೆ “ರೆಕ್ಕೆ ಇದ್ದರೆ ಸಾಕೆ” ಎಂದು ಹೆಸರಿಟ್ಟಿದ್ದಾರೆ. ಇಂಗ್ಲಿಷ್ ನಲ್ಲೂ(against the grain) ಈ […]
TV9 ಲೈಫ್ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್ಪೋ 2023
ಇಡೀ ಭಾರತದಲ್ಲೇ ಬೆಂಗಳೂರು ಗಾರ್ಡನ್ ಸಿಟಿ ಎಂದು ಹೆಸರು ಪಡೆದಿದೆ. ಇದು ಟೆಕ್ನಾಲಜಿ ಹಬ್ ಎನ್ನುವ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಸ್ಟಾರ್ಟಪ್ ಮತ್ತು ತಂತ್ರಜ್ಞಾನ ಆಧಾರಿತ ಕಂಪನಿಗಳ ಪ್ರಧಾನ ಕಛೇರಿಗಳು ಇಲ್ಲಿ ತಲೆಯೆತ್ತಿವೆ. ಬೆಂಗಳೂರು ತನ್ನ ಕಾಸ್ಮೋಪಾಲಿಟನ್ ಸಂಸ್ಕೃತಿಯಿಂದಾಗಿ ಫ್ಯಾಷನ್ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ. ಸದ್ಯ ಈ ಬೇಸಿಗೆಯಲ್ಲಿ ತಮ್ಮ ಶಾಪಿಂಗ್ ಮಾಡಲು ರಿಯಾಯಿತಿ ಮತ್ತು ಕಡಿಮೆ ಮೌಲ್ಯದ ವಸ್ತುಗಳನ್ನು ಹುಡುಕುತ್ತಿರುವವರಿಗೆ TV9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್ಪೋ ಅತ್ಯುತ್ತಮ ವೇದಿಕೆಯಾಗಿದೆ. […]
ವಿಜಯನಗರವನ್ನು ಮರುಸೃಷ್ಟಿಸಿದ ಜೂನಿಯರ್
ಗಾಲಿ ಜನಾರ್ಧನರೆಡ್ಡಿ ಮಗ ಕಿರೀಟಿ ನಟಿಸುತ್ತಿರುವ ಜೂನಿಯರ್ ಚಿತ್ರದ ಚಿತ್ರೀಕರಣ ಪ್ಲಾನಿನಂತೇ ಸಾಗುತ್ತಿದೆ. ಈ ಚಿತ್ರಕ್ಕಾಗಿ ಕನ್ನಂಬಾಡಿ ಬಳಿಯ ಚಿಕ್ಕರಾಯಹಳ್ಳಿಯನ್ನು ವಿಜಯನಗರವನ್ನಾಗಿ ಮಾರ್ಪಡಿಸುತ್ತಿದ್ದಾರೆ. ಇಡೀ ಹಳ್ಳಿಯಲ್ಲಿ ಒಮ್ಮೆ ತಿರುಗಿದರೆ, ಯಾವುದು ನಿಜವಾದ ಮನೆ, ಯಾವುದು ಸೆಟ್ ಅಂತಲೇ ಗೊತ್ತಾಗುವುದಿಲ್ಲ. ಆಮಟ್ಟಿಗೆ ಖರ್ಚು ಮಾಡಿ ಹಳೆಯ ಗ್ರಾಮವನ್ನಾಗಿ ಪರಿವರ್ತಿಸಿದ್ದಾರೆ. ಬಾಹುಬಲಿ ಚಿತ್ರಕ್ಕೆ ಕಲಾನಿರ್ದೇಶನ ಮಾಡಿರುವ ಮನು ಜಗಧ್ ಈ ಸಿನಿಮಾಗೂ ಆರ್ಟ್ ಡೈರೆಕ್ಷನ್ ಮಾಡುತ್ತಿದ್ದಾರೆ. ಬರಿಯ ತೊಟ್ಟಿಮನೆ ನಿರ್ಮಾಣಕ್ಕೆ ಏನಿಲ್ಲವೆಂದರೂ ಕೋಟಿ ರುಪಾಯಿ ವ್ಯಯಿಸಿದ್ದಾರೆ. ಈ ಹಳ್ಳಿಯಲ್ಲಿ ಕನ್ನಡ […]
ಕುರಿ ಪ್ರತಾಪಿಯ ದೌಲತ್ತು – ಸಿನಿಮಾಗಳಿಗೆ ಆಪತ್ತು!
ಕುರಿ ಪ್ರತಾಪ ಅನ್ನೋ ಹೆಸರಿನ ಕಾಮಿಡಿ ನಟ ಒಬ್ಬ ಇದ್ದಾನಲ್ಲಾ? ಒಂದು ಕಾಲದಲ್ಲಿ ʻಕುರಿಗಳು ಸಾರ್ ಕುರಿಗಳುʼ ಎನ್ನುವ ಪ್ರಾಂಕ್ ಶೋದಿಂದ ಸಿಕ್ಕಾಪಟ್ಟೆ ಫೇಮಸ್ಸಾಗಿದ್ದವನು ಈತ. ಆ ಕಾರ್ಯಕ್ರಮದ ಮೂಲಕವೇ ಒಂದಿಷ್ಟು ಮಂದಿ ಸಿನಿಮಾದವರನ್ನು ಪರಿಚಯ ಮಾಡಿಕೊಂಡು, ಛಾನ್ಸು ಗಿಟ್ಟಿಸಿಕೊಂಡ. ಅದೇ ಹೊತ್ತಿಗೆ ಸಾಧು ಕೋಕಿಲನ ಹಾವಳಿ ಮಿತಿ ಮೀರಿ ಹೋಗಿತ್ತು. ಸಿನಿಮಾವೊಂದರಲ್ಲಿ ನಟಿಸಲು ಈತ ಲಕ್ಷಾಂತರ ರುಪಾಯಿ ಪ್ಯಾಕೇಜ್ ಡೀಲ್ ಮಾಡುತ್ತಿದ್ದರು. ಕಾಸು ಕೊಟ್ಟರೂ ಕೈಗೆ ಸಿಗದೆ ಆಟವಾಡಿಸುತ್ತಿದ್ದರು. ಪೇಮೆಂಟು ಈಸಿಕೊಂಡು ಸೀದಾ ಗೋವಾ, ಮಲೇಶಿಯಾ […]
ಇಂಜಿನಿಯರ್ ಸೌಂಡು ಮಾಡೋದು ಗ್ಯಾರೆಂಟಿ!
ಸಿನಿಮಾದ ಅಫಿಷಿಯಲ್ ಟೀಸರ್ ಈಗ ಬಿಡುಗಡೆಯಾಗಿದೆ. ನಮ್ಮೂರಿನಲ್ಲಿ ನಡೆದ ಘಟನೆಯೊಂದರ ಸುತ್ತ ನಡೆದ ವಿಚಾರವನ್ನೇ ಕಾಡುವಂತೆ ಕಟ್ಟಿದ್ದಾರೆ ಅನ್ನೋದರ ಸೂಚನೆ ಸಿಕ್ಕಿದೆ. ಅತಿರಂಜಕ ವಿಚಾರಗಳನ್ನು ತುರುಕದೇ ಹೇಳಬೇಕಾದ್ದನ್ನು ನೇರಾನೇರ ನಿರೂಪಿಸಿದ್ದಾರೆ ಅನ್ನೋದು ಟೀಸರಿನಲ್ಲೇ ಗೊತ್ತಾಗುತ್ತಿದೆ. ನೋ ಡೌಟ್! ಕನ್ನಡ ಚಿತ್ರರಂಗ ಪಥ ಬದಲಿಸುತ್ತಿದೆ. ಒಂದಕ್ಕಿಂತಾ ಒಂದು ಭಿನ್ನ ಚಿತ್ರಗಳಿಲ್ಲಿ ಜೀವಪಡೆಯುತ್ತಿವೆ. ಸಿನಿಮಾ ಅಂದರೆ ಹೀಗೇ ಇರಬೇಕು ಅಂತಾ ಅಘೋಷಿತ ಸೂತ್ರ, ಸಿದ್ದ ಚೌಕಟ್ಟಲ್ಲಿ ಒದ್ದಾಡುತ್ತಿದ್ದ ಕಾಲವೊಂದಿತ್ತು. ಅಲ್ಲಲ್ಲಿ ಕೆಲವರು ಹೊಸ ತನವನ್ನು ಪರಿಚಯಿಸುತ್ತಿದ್ದರು. ಆದರೆ ಈಗ ಕನ್ನಡ […]
ಈ ಅಡ್ಡದಲ್ಲಿ ಏನೇನೋ ಇದೆ…!
ಲವ್ ಸಬ್ಜೆಕ್ಟಿನ ಸಿನಿಮಾ ಮಾಡುವವರು ತೀರಾ ಫ್ರೆಶ್ ಎನಿಸುವ ಸಂಭಾಷಣೆ ಬೇಕೆನಿಸಿದರೆ, ಹೇಗಾದರೂ ಅಜ್ಜೀಪುರದ ಈ ರವಿಯನ್ನು ಒಪ್ಪಿಸಿ ಬರೆಸಿಕೊಳ್ಳಿ. ಇವರು ರವಿ ಅಜ್ಜೀಪುರ. ಮಾಧ್ಯಮ ವಲಯದಲ್ಲಿವರು ಸದಾ ಪ್ರವಹಿಸುವ ಅಚ್ಚರಿ. ಪ್ರಿಂಟ್ ಮೀಡಿಯಾದಲ್ಲಿ ಹೆಸರು ಮಾಡುತ್ತಿದ್ದಾಗಲೇ ಸಡನ್ನಾಗಿ ಟೀವಿ ಮಾಧ್ಯಮದತ್ತ ಮುಖ ಮಾಡಿದವರು. ಅಲ್ಲಿಂದ ಮತ್ತೆ ಪತ್ರಿಕೆಯ ಕಡೆ ‘ಮನಸು’ ಕೊಟ್ಟವರು. ಪತ್ರಕರ್ತರಾಗಿದ್ದುಕೊಂಡೇ ವಿನ್ಯಾಸ ಕಲಾವಿದರಾಗಿ, ನೂರಾರು ಪುಸ್ತಕಗಳ ಮುಖಪುಟಗಳಿಗೆ ಬಣ್ಣ ತುಂಬಿದವರು. ಒಂದು ಪತ್ರಿಕೆಯ ಕಂಟೆಂಟ್ ಹೇಗಿರಬೇಕು ಅನ್ನೋದರ ಜೊತೆಗೆ ಅದರ ಪ್ರೆಸೆಂಟೇಷನ್ ಕೂಡಾ […]
ನನ್ನ ತಂದೆ ನನ್ನ ರೋಲ್ ಮಾಡಲ್!
ಸಚಿನ್ ಧನಪಾಲ್ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಚಿತ್ರ ‘ಚಾಂಪಿಯನ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದೊಂದು ಕ್ರೀಡಾ ಚಿತ್ರವಾಗಿದ್ದು, ಅಥ್ಲೀಟ್ ಒಬ್ಬನ ಜೀವನದ ಕುರಿತಾಗಿ ಈ ಚಿತ್ರ ಸಾಗುತ್ತದಂತೆ. ಈ ಚಿತ್ರದಲ್ಲಿ ಅಥ್ಲೀಟ್ ಆಗಿ ಸಚಿನ್ ನಟಿಸಿದ್ದಾರೆ. ಚಿತ್ರದಲ್ಲಿ ಹೀರೋ ಆಗಿ ನಟಿಸಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಸಚಿನ್ಗೆ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ ಇದ್ದರೂ, ಅದಕ್ಕಿಂತ ಹೆಚ್ಚಾಗಿ ಆರ್ಮಿಗೆ ಸೇರಿ ದೇಶಸೇವೆ ಮಾಡಬೇಕು ಎಂದು ಮನಸ್ಸಿತ್ತಂತೆ. ಅದು ಸಾಧ್ಯವಾಗದಿದ್ದರಿಂದ, ಅವರು ಈ ಕಡೆ […]