ನಟ, ರಿಯಾಲಿಟಿ ಶೋ ಮೂಲಕ ಹೆಸರು ಮಾಡಿರುವ ರೂಪೇಶ್ ಶೆಟ್ಟಿ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಹೋದ ಸಲದ ಸೀಜನ್ನಿನ ಬಿಗ್ಬಾಸ್ ಶೋ ವಿನ್ನರ್ ರೂಪೇಶ್ ಶೆಟ್ಟಿ ನೆನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಹೊತ್ತಿನಲ್ಲಿ ಅವರ ಸುತ್ತಲಿನವರೆಲ್ಲಾ ಸಂಭ್ರಮಿಸುವ ಸುದ್ದಿಯೊಂದು ಹೊರಬಿದ್ದಿದೆ. ಬಿಗ್ ಬಾಸ್ ಶೋ ಗೆದ್ದ ನಂತರದಲ್ಲಿ ರೂಪೇಶ್ ಶೆಟ್ಟಿಯ ಸಿನಿಮಾ ಕೆರಿಯರ್ ಏನಾಗಬಹುದು ಎನ್ನುವ ಕುತೂಹಲವಿತ್ತು. ಇತ್ತೀಚೆಗಷ್ಟೇ ʻಸರ್ಕಸ್ʼ ಎನ್ನುವ ತುಳು ಚಿತ್ರವೊಂದನ್ನು ನಿರ್ದೇಶನ ಮಾಡಿದ್ದ ರೂಪೇಶ್ ಈಗ ಕನ್ನಡದ ಸಿನಿಮಾವೊಂದರ ಟೈಟಲ್ ಅನಾವರಣಗೊಳಿಸಿದ್ದಾರೆ. […]
ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ. ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಸ್ ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೇ ಅಂತೀರಾ? ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಕಂಪನಿ ಎಗಡೈ […]
ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ. ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ […]
ಸಾಕಷ್ಟುಕಡೆ ಪೋಸ್ಟರು, ಬ್ಯಾನರುಗಳಲ್ಲಿ ʻರೂರಲ್ ಸ್ಟಾರ್ʼ ಎನ್ನುವ ಹೆಸರು ಕಾಣುತ್ತದೆ. ಸಿಟಿ ಜನ ಅದನ್ನು ನೋಡಿ ಆಶ್ಚರ್ಯಗೊಳ್ಳೋದು ಸಹಜ. ʻಯಾರಪ್ಪಾ ಇದು ರೂರಲ್ ಸ್ಟಾರ್?ʼ ಅಂತಾ. ಅಂಜನ್ ಅವರನ್ನು ಎಲ್ಲರೂ ರೂರಲ್ ಸ್ಟಾರ್ ಅಂತಲೇ ಮೆರೆಸುತ್ತಾರೆ. ಅದಕ್ಕೆ ಕಾರಣವೂ ಇದೆ. ಉತ್ತರ ಕರ್ನಾಟಕ ಸೀಮೆಯಲ್ಲಿ ಸಿನಿಮಾ ಸಾಹಸಗಳನ್ನು ಮಾಡುತ್ತಾ ಕರ್ನಾಟಕದಾದ್ಯಂತ ಪ್ರಸಿದ್ಧಿ ಪಡೆದುಕೊಂಡಿರುವವರು ಅಂಜನ್. ರೂರಲ್ ಸ್ಟಾರ್ ಅಂಜನ್ ಅಂದರೆ ಕಲಾ ಪ್ರೇಮಿಗಳೆಲ್ಲ ನಿಜಕ್ಕೂ ಹುಬ್ಬೇರಿಸುತ್ತಾರೆ. ತಮ್ಮದೇ ವಲಯ ಸೃಷ್ಟಿಸಿಕೊಂಡು, ಅಲ್ಲಿ ಅಪಾರ ಹೆಸರು ಮಾಡಿರುವ ಅಂಜನ್ […]
ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ. ನವ ಪ್ರತಿಭೆ ಎಸ್.ವಸಂತ್ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ಕೋರ್ಸ್ನ್ನು […]
ಗಾಲಿ ಜನಾರ್ಧನರೆಡ್ಡಿ ಮಗ ಕಿರೀಟಿ ನಟಿಸುತ್ತಿರುವ ಜೂನಿಯರ್ ಚಿತ್ರದ ಚಿತ್ರೀಕರಣ ಪ್ಲಾನಿನಂತೇ ಸಾಗುತ್ತಿದೆ. ಈ ಚಿತ್ರಕ್ಕಾಗಿ ಕನ್ನಂಬಾಡಿ ಬಳಿಯ ಚಿಕ್ಕರಾಯಹಳ್ಳಿಯನ್ನು ವಿಜಯನಗರವನ್ನಾಗಿ ಮಾರ್ಪಡಿಸುತ್ತಿದ್ದಾರೆ. ಇಡೀ ಹಳ್ಳಿಯಲ್ಲಿ ಒಮ್ಮೆ ತಿರುಗಿದರೆ, ಯಾವುದು ನಿಜವಾದ ಮನೆ, ಯಾವುದು ಸೆಟ್ ಅಂತಲೇ ಗೊತ್ತಾಗುವುದಿಲ್ಲ. ಆಮಟ್ಟಿಗೆ ಖರ್ಚು ಮಾಡಿ ಹಳೆಯ ಗ್ರಾಮವನ್ನಾಗಿ ಪರಿವರ್ತಿಸಿದ್ದಾರೆ. ಬಾಹುಬಲಿ ಚಿತ್ರಕ್ಕೆ ಕಲಾನಿರ್ದೇಶನ ಮಾಡಿರುವ ಮನು ಜಗಧ್ ಈ ಸಿನಿಮಾಗೂ ಆರ್ಟ್ ಡೈರೆಕ್ಷನ್ ಮಾಡುತ್ತಿದ್ದಾರೆ. ಬರಿಯ ತೊಟ್ಟಿಮನೆ ನಿರ್ಮಾಣಕ್ಕೆ ಏನಿಲ್ಲವೆಂದರೂ ಕೋಟಿ ರುಪಾಯಿ ವ್ಯಯಿಸಿದ್ದಾರೆ. ಈ ಹಳ್ಳಿಯಲ್ಲಿ ಕನ್ನಡ […]
ಕುರಿ ಪ್ರತಾಪ ಅನ್ನೋ ಹೆಸರಿನ ಕಾಮಿಡಿ ನಟ ಒಬ್ಬ ಇದ್ದಾನಲ್ಲಾ? ಒಂದು ಕಾಲದಲ್ಲಿ ʻಕುರಿಗಳು ಸಾರ್ ಕುರಿಗಳುʼ ಎನ್ನುವ ಪ್ರಾಂಕ್ ಶೋದಿಂದ ಸಿಕ್ಕಾಪಟ್ಟೆ ಫೇಮಸ್ಸಾಗಿದ್ದವನು ಈತ. ಆ ಕಾರ್ಯಕ್ರಮದ ಮೂಲಕವೇ ಒಂದಿಷ್ಟು ಮಂದಿ ಸಿನಿಮಾದವರನ್ನು ಪರಿಚಯ ಮಾಡಿಕೊಂಡು, ಛಾನ್ಸು ಗಿಟ್ಟಿಸಿಕೊಂಡ. ಅದೇ ಹೊತ್ತಿಗೆ ಸಾಧು ಕೋಕಿಲನ ಹಾವಳಿ ಮಿತಿ ಮೀರಿ ಹೋಗಿತ್ತು. ಸಿನಿಮಾವೊಂದರಲ್ಲಿ ನಟಿಸಲು ಈತ ಲಕ್ಷಾಂತರ ರುಪಾಯಿ ಪ್ಯಾಕೇಜ್ ಡೀಲ್ ಮಾಡುತ್ತಿದ್ದರು. ಕಾಸು ಕೊಟ್ಟರೂ ಕೈಗೆ ಸಿಗದೆ ಆಟವಾಡಿಸುತ್ತಿದ್ದರು. ಪೇಮೆಂಟು ಈಸಿಕೊಂಡು ಸೀದಾ ಗೋವಾ, ಮಲೇಶಿಯಾ […]
ಸಿದ್ದಾರ್ಥ ಸಿನಿಮಾದ ಮೂಲಕ ವಿನಯ್ ರಾಜ್ ಕುಮಾರ್ ಲಾಂಚ್ ಆದಾಗ ಪ್ರೇಕ್ಷಕರು ಮಾತ್ರವಲ್ಲದೆ, ಚಿತ್ರರಂಗದ ವಲಯದಲ್ಲೂ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಮೊದಲ ಸಿನಿಮಾನೇ ಅಂದುಕೊಂಡಂತೆ ಆಗಲಿಲ್ಲ. ಎರಡನೇದಾದರೂ ಕೈ ಹಿಡಿಯಬಹುದು ಅಂದುಕೊಂಡಿದ್ದರು. ರನ್ ಆಂಟನಿ ಎನ್ನುವ ಸಿನಿಮಾ ವಿನಯ್ ರಾಜ್ ಕುಮಾರ್ ವೃತ್ತಿ ಬದುಕಿಗೆ ಭಯಾನಕ ಏಟು ಕೊಟ್ಟುಬಿಟ್ಟಿತು. ದೊಡ್ಮನೆಯ ಬ್ಯಾನರಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ನಿರ್ಮಾಣದ ಕಡೆಯ ಸಿನಿಮಾವೊಂದು ಈ ಮಟ್ಟದಲ್ಲಿರುತ್ತದೆ ಅಂತಾ ಯಾರೂ ಅಂದಾಜಿಸಿರಲಿಲ್ಲ. ಆ ಚಿತ್ರದ ನಿರ್ದೇಶಕ ರಘುಶಾಸ್ತ್ರಿಯ ಮಾತಿನಲ್ಲಿದ್ದ ನಿಯತ್ತು ಕೃತಿಯಲ್ಲಿರಲಿಲ್ಲ. […]
ರಘು ಸಿಂಗಂ ಅವರ ನಿರ್ಮಾಣ ಹಾಗೂ ಸೂರ ಅವರ ನಿರ್ದೇಶನದಲ್ಲಿ ಶ್ರೀನಗರ ಕಿಟ್ಟಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಬಹು ನೀರಿಕ್ಷಿತ ‘ಗೌಳಿ’ ಚಿತ್ರ ಫೆಬ್ರವರಿ ೨೪ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಸಿನಿ ಪ್ರೇಮಿಗಳ ಹೃದಯ ಗೆದ್ದಿದೆ. ‘ಗೌಳಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದೆ. ಗೌಳಿಗರ ಜನಾಂಗಕ್ಕೆ ಸಂಬಂದಿಸಿದ ಕಥೆ ಒಳಗೊಂಡ ಈ ಸಿನಿಮಾದಲ್ಲಿ ಶಿರಸಿ ಸುತ್ತಮುತ್ತಲಿನ […]
ಚಿತ್ರರಂಗಕ್ಕೆ ಅನುಕೂಲವಾಗುವ ಹೊಸ ಪ್ರಯೋಗಳು ನಡೆಯುತ್ತಲೇ ಇವೆ. ಸದ್ಯ ಡಿಜಿಟಲ್ ಕ್ಷೇತ್ರದಲ್ಲಿ ಎಲ್ಲರಿಗೂ ಯುಪಯೋಗಕ್ಕೆ ಬರುವ ’ಶ್ರೀಪಾದ ಸ್ಟುಡಿಯೋಸ್’ ಶುರುವಾಗಿದೆ. ಬೆಂಗಳೂರಿನ ಹಂಪಿನಗರದಲ್ಲಿರುವ ನೂತನ ಕಛೇರಿಯನ್ನು ನಟ ರಮೇಶ್ಅರವಿಂದ್ ಉದ್ಗಾಟಿಸಿ ತಂಡಕ್ಕೆ ಶುಭಹಾರೈಸಿದರು. ನಂತರ ಮಾತನಾಡಿದ ರಮೇಶ್ಅರವಿಂದ್ ಯುವ ತಂಡದಲ್ಲಿ ಒಂಥರ ಕ್ರಿಯೇಟಿವಿಟಿ ಇದೆ. ಅವರಲ್ಲಿ ಸ್ವಂತವಾಗಿ ಬ್ಯುಸಿನೆಸ್ ಶುರು ಮಾಡುವ ಧೈರ್ಯವಿತ್ತು. ಅದರಂತೆ ಪ್ರಾರಂಭ ಮಾಡಿದ್ದಾರೆ. ಇವರುಗಳಿಗೆ ಇನ್ನಷ್ಟು ಹಲವು ಗೆಲುವುಗಳು, ಕ್ರಿಯೇಟಿವಿಟಿಗಳು ಕಾಯ್ತಾ ಇದೆ. ನೀವುಗಳು ಬೆಳೀತಾ ಇದ್ದೀರಾ ಅಂದರೆ ಸರಿಯಾದ ಹಾದಿಯಲ್ಲಿ […]