ರಂಗಭೂಮಿ ಹಿನ್ನೆಲೆಯಿಂದ ಬಂದ ಎಷ್ಟೋ ಕಲಾವಿದರು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅದೇ ಹಾದಿಯಲ್ಲಿ ಸಾಗ್ತಿರುವವರು ರಾಕೇಶ್ ದಳವಾಯಿ. ‘ಧೀರ ಭಗತ್ ರಾಯ್’ ಚಿತ್ರದ ಮೂಲಕ ರಾಕೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಏನು ಕರ್ಮ ಹಾಡು ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕುರಿತು ಬೆಂಗಳೂರಿನ ಕಲಾವಿದರ ಸಂಘದಲ್ಲಿ ಪ್ರತಿಕಾಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ನಿರ್ದೇಶಕರಾದ ಕರ್ಣನ್.ಎಸ್, ಏನು ಕರ್ಮ ಸಾಂಗ್ ಗೆ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. […]
ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಚಿತ್ರೀಕರಣ ಶುರುವಾದಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದೆ. ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳುವ ನಿಟ್ಟಿನಲ್ಲಿ ನಿರ್ದೇಶಕರ ಪಟ್ಟುಗಳೆಲ್ಲವೂ ಫಲ ಕೊಟ್ಟಿವೆ. ಇದೀಗ ಅದೇ ಹಾದಿಯಲ್ಲಿ ಸಾಗಿ ಬಂದಿರುವ ಚಿತ್ರತಂಡ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಈ ಸಿನಿಮಾ ಶೀರ್ಷಿಕೆ ಕೇಳಿದರೇನೇ ಒಟ್ಟಾರೆ ಕಥಾನಕದ ಬಗೆಗೊಂದು ಸುಳಿವು ಸಿಗುತ್ತದೆ. ಆದರೆ, ಅಂಥಾ ಯಾವ ಅಂದಾಜಿಗೂ ನಿಲುಕದ ಸ್ವರೂಪದಲ್ಲಿ ಈ ಸಿನಿಮಾವನ್ನು ರೂಪಿಸಿರುವ […]
ಈ ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕೈಲಾಸ ಕಾಸಿದ್ರೆ’. ನಾಗ್ ವೆಂಕಟ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಈ ದಿನಮಾನದ ಯುವ ಜನಾಂಗದ ಕಥೆಯನ್ನೊಳಗೊಂಡಿರುವ, ಎಲ್ಲ ಅಭಿರುಚಿಯ ಯುವ ಪ್ರೇಕ್ಷಕರನ್ನೂ ಕೂಡಾ ಆವರಿಸಿಕೊಳ್ಳುವ ಕಥೆ ಹೊಂದಿರುವ ಚಿತ್ರವೆಂಬ ವಿಚಾರವನ್ನ ಚಿತ್ರತಂಡವೇ ಜಾಹೀರು ಮಾಡಿತ್ತು. ಹಾಡುಗಳ ಮೂಲಕ ಹಂತ ಹಂತವಾಗಿ ಸೆಳೆಯುತ್ತಾ ಸಾಗಿ ಬಂದಿರುವ ಈ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಯುವ ಆವೇಗದ ಕಥೆಯೊಂದರ ಸ್ಪಷ್ಟ ಸುಳಿವಿನೊಂದಿಗೆ ಈ […]
ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಅದಾಗಲೇ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣ ಸಹ ಸಾಂಘವಾಗಿ ಮುಕ್ತಾಯಗೊಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಸಮಾಪ್ತಿಗೊಳಿಸಿಕೊಂಡಿದೆ. ಈ ಹಂತದಲ್ಲಾದ ಅಮೋಘ ಅನುಭವಗಳನ್ನೂ ಹಂಚಿಕೊಂಡಿದೆ! ನಿರ್ದೇಶಕ ರುದ್ರಶಿವ ಅತ್ಯಂತ ಅಚ್ಚುಕಟ್ಟಾಗಿ ಪ್ಲಾನು ಮಾಡಿಕೊಂಡು, ಅದಕ್ಕೆ ತಕ್ಕುದಾಗಿಯೇ ಮುಂದಡಿ ಇಡುತ್ತಿದ್ದಾರೆ. ಅದರ ಭಾಗವಾಗಿಯೇ ಮಡಿಕೇರಿಯ ಗೋಣಿಕೊಪ್ಪ, […]
ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ […]
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 ಎನ್ 6. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್, ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ “4 ಎನ್ 6” ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಕಥೆ, […]
ಕನ್ನಡದಲ್ಲೀಗ ಕಂಟೆಂಟ್ ಆಧಾರಿತ ಸಿನಿಮಾಗಳ ಪ್ರಭೆ ಜೋರಾಗಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಚಿತ್ರ ಫೋಟೋ. ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಈ ಸಿನಿಮಾದ ಮೊದಲ ನೋಟ ಅನಾವರಣಗೊಂಡಿದೆ. ನಟರಾಕ್ಷಸ ಡಾಲಿ ಧನಂಜಯ್ ಹಾಗೂ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ. ಶ್ರೀರಂಗಪಟ್ಟದಲ್ಲಿರುವ ಪ್ರಕಾಶ್ ರಾಜ್ ಒಡೆತನದ ನಿರ್ದಿಗಂತ ಫಾರಂ ಹೌಸ್ ನಲ್ಲಿ ಫೋಟೋ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಬಹರಗಾರರು ಹಾಗೂ ಪತ್ರಕರ್ತರಾಗಿರುವ ಜೋಗಿ, […]
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆಯಷ್ಟೇ ಬಾಕಿ ಉಳಿದಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್ ವುಡ್ ಟು ಬಾಲಿವುಡ್ ತನಕ ಎಲ್ಲಾ ಇಂಡಸ್ಟ್ರೀಯ ಸ್ಟಾರ್ ಗಳು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 10 ಸೀಸನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆಷ್ಟೇ ದುಬೈನಲ್ಲಿ ಅದ್ಧೂರಿಯಾಗಿ ಸಿಸಿಎಲ್ ಗೆ ಚಾಲನೆ ಕೊಡಲಾಗಿತ್ತು. ಇದೀಗ ತಂಡಗಳು ಕ್ರಿಕೆಟ್ ಅಭ್ಯಾಸಕ್ಕಿಳಿದಿದ್ದಾರೆ. ಅದರಂತೆ ಕರ್ನಾಟಕ ಬುಲ್ಡೋಜರ್ಸ್ ತಂಡ ಅಭ್ಯಾಸಕ್ಕೂ ಮುನ್ನ ಮಾಧ್ಯಮದರೊಟ್ಟಿಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ. ಇತ್ತೀಚೆಗಷ್ಟೇ ಖಾಸಗಿ […]
ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್. ಫೋಟೋ ಸಿನಿಮಾವನ್ನು ನಿರ್ದಿಗಂತದ ಮೂಲಕ ಪ್ರಕಾಶ್ ರಾಜ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕದ […]
”ಫಾರ್ ರಿಜಿಸ್ಟ್ರೇಷನ್” ಸ್ಯಾಂಡಲ್ವುಡ್ನಲ್ಲಿ ಹಲವು ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಬಹುನಿರೀಕ್ಷಿತ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.. ವಾಲಗದ ಮೂಲಕ ಇಡೀ ಚಿತ್ರತಂಡ ಸುದ್ದಿಗೋಷ್ಠಿಗೆ ಎಂಟ್ರಿ ಕೊಟ್ಟಿದ್ದು, ವಿಶೇಷವಾಗಿತ್ತು. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿ ನಟ ಪೃಥ್ವಿ ಅಂಬಾರ್ ಮಾತನಾಡಿ, […]