ಮಾದಕ ವ್ಯಸನ ಮತ್ತು ಮಧ್ಯಪಾನದ ಪರಿಣಾಮವಾಗಿ ಹಾದಿ ತಪ್ಪುತ್ತಿರುವ ಯುವ ಜನಾಂಗಕ್ಕೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ “ಕನಲೆರಿಯುಂ ಬಾಲ್ಯಂ(ಬೆಂಕಿಯಲ್ಲಿ ಸುಡುವ ಬಾಲ್ಯ)” ಎಂಬ ಕಿರುಚಿತ್ರವೊಂದು ಸಿದ್ಧವಾಗಿದೆ. ಕಿನಾನೂರು-ಕರಿಂದಳಂ ಗ್ರಾಮ ಪಂಚಾಯತ್ ವತಿಯಿಂದ ರಾಜ್ಯ ಅಬಕಾರಿ, ಆರೋಗ್ಯ, ಶಿಕ್ಷಣ ಇಲಾಖೆಗಳ ಸಹಕಾರದೊಂದಿಗೆ ಈ ಕಿರುಚಿತ್ರದ ನಿರ್ಮಾಣವಾಗುತ್ತಿದೆ. ಇನ್ನು ಈ ಚಿತ್ರದ ಕಥೆ, ಚಿತ್ರಕತೆ ಬರೆದು ಅಜಿ ಕುಟ್ಟಮತ್ ಅವರು ನಿರ್ದೇಶನ ಮಾಡಿದ್ದಾರೆ.
ಮಾದಕ ಪದಾರ್ಥಗಳ ಬಳಕೆ ವಿರುದ್ಧ ಸಾಧಾರಣ ಗತಿಯಲ್ಲಿ ನಡೆಸುವ ಜಾಗೃತಿ ತರಗತಿ ಇತ್ಯಾದಿಗಳಿಗಿಂತ ಭಿನ್ನವಾಗಿ ಹೆಚ್ಚುವರಿ ಪರಿಣಾಮ ನೀಡಲಿದೆ ಎಂಬ ಕಾರಣಕ್ಕಾಗಿ ಕಿರುಚಿತ್ರ ನಿರ್ಮಿಸುವ ಯೋಜನೆ ಕಿನಾನೂರು-ಕರಿಂದಳಂ ಗ್ರಾಮ ಪಂಚಾಯತ್ ಹಮ್ಮಿಕೊಂಡಿತ್ತಂತೆ. ಇದಕ್ಕೆ ವಿವಿಧ ಇಲಾಖೆಗಳ ಬೆಂಬಲವೂ ಲಭಿಸಿದಾಗ ನಿರೀಕ್ಷೆಗೂ ಮೀರಿ ತ್ವರಿತ ಗತಿಯಲ್ಲಿ ಚಿತ್ರೀಕರಣ ಪೂರ್ಣಗೊಳಿಸಲು ಸಾಧ್ಯವಾಯಿತಂತೆ. ಈ ಕಿರುಚಿತ್ರದ ಚಿತ್ರೀಕರಣವನ್ನು ಕಾಸರಗೋಡು, ಪರಪ್ಪ,ನೀಲೇಶ್ವರಂ, ಶಿವಮೊಗ್ಗ, ವಳಪಟ್ಟಣಂ ಮೊದಲಾದ ಪ್ರದೇಶಗಳಲ್ಲಿ ನಡೆಸಲಾಗಿದೆಯಂತೆ. ಒಂದೂವರೆ ಗಂಟೆ ಅವಧಿಯ ಈ ಕಿರುಚಿತ್ರವನ್ನು ಮುಂದಿನ ತಿಂಗಳ ಮೊದಲ ವಾರ ರಿಲೀಸ್ ಮಾಡಲಾಗುವುದಂತೆ.
No Comment! Be the first one.