ಸಿನಿಮಾ ನಿರ್ದೇಶನ, ನಿರ್ಮಾಣ ಸೇರಿದಂತೆ ಗುರು ದೇಶಪಾಂಡೆ ಏನಾದರೊಂದು ಕ್ರಿಯಾಶೀಲ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಗುರು ದೇಶಪಾಂಡೆ ಇದೀಗ ಮತ್ತೊಂದು ಹೊಸ ಹೆಜ್ಜೆಯಿರಿಸಿzರೆ. ಸಿನಿಮಾರಂಗಕ್ಕೆ ಬರಲು ಕನಸು ಕಟ್ಟಿಕೊಂಡು ಕಾಯುತ್ತಿರುವ ಯುವ ಪ್ರತಿಭೆಗಳಿಗಾಗಿ ನಟನೆ, ನಿರ್ದೇಶನ, ಸಂಕಲನ, ನೃತ್ಯ ಸೇರಿದಂತೆ ಸಿನಿಮಾರಂಗಕ್ಕೆ ಸಂಬಂಧಿಸಿದ ಹಲವು ವಿಭಾಗಗಳಲ್ಲಿ ಕೆಲಸ ಕಲಿಯಲು ‘ಜಿ ಅಕಾಡೆಮಿ’ ಎಂಬ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ನಾಗರಬಾವಿ ದೀಪಾ ಕಾಂಪ್ಲೆಕ್ಸ್ ಬಳಿ ಇರುವ ಮುದ್ದಿನಪಾಳ್ಯ ಮುಖ್ಯ ರಸ್ತೆಯಲ್ಲಿ ‘ಜಿ ಅಕಾಡೆಮಿ ಕಾರ್ಯಾರಂಭ ಮಾಡಲಿದೆ. ‘ಜಿ ಅಕಾಡೆಮಿಯನ್ನು ಇದೇ ಅಕ್ಟೋಬರ್ ೧೪ರಂದು ನಟ ಶ್ರೀ ಮುರಳಿ ಉದ್ಘಾಟಿಸಲಿದ್ದಾರೆ.
ಖ್ಯಾತ ನಿರ್ದೇಶಕರು, ನುರಿತ ತಂತ್ರಜ್ಞರು ಈ ಸಂಸ್ಥೆಯಲ್ಲಿ ತರಬೇತಿ ನೀಡಲಿದ್ದಾರೆ ಎಂಬುದು ವಿಶೇಷ. ಹಿರಿಯ ನಿರ್ದೇಶಕ ಸುನಿಲ್ಕುಮಾರ್ ದೇಸಾಯಿ, ಸಂಕಲನಕಾರ ಸುರೇಶ್ ಅರಸ್ ಮತ್ತು ಕಿರುತೆರೆಯ ಜಯಪ್ರಕಾಶ್ ಶೆಟ್ಟಿ ಮೆಂಟರ್ಗಳಾಗಿದ್ದಾರೆ. ನಿರ್ಮಾಪಕ ಕೆ.ಮಂಜು, ಉದಯ ಕೆ. ಮೆಹ್ತಾ, ನಿರ್ದೇಶಕ ದಯಾಳ್ ಪದ್ಮನಾಭನ್, ಭರ್ಜರಿ ಚೇತನ್ ಕುಮಾರ್, ರಾಮ ರಾಮ ರೇ ಸತ್ಯಪ್ರಕಾಶ್, ಬಿ.ಎಂ. ಗಿರಿರಾಜ, ಮೌನೇಶ್ ಬಡಿಗೇರ್, ನವೀನ್ ಕೃಷ್ಣ, ಕೆಂಪರಾಜು, ಕೆ.ಎಸ್. ಚಂದ್ರಶೇಖರ್, ಆರ್.ಜೆ. ನೇತ್ರಾ, ಹೇಮಲತಾ, ಸಂತೋಷ್ ನಾಯಕ್, ಮದನ್-ಹರಿಣಿ, ಗಿರೀಶ್, ಡಿಫರೆಂಟ್ ಡ್ಯಾನಿ, ದೀಪಕ್ ಮತ್ತು ಶ್ರೀನಿವಾಸ್ ಸೇರಿದಂತೆ ಅನೇಕರು ಆಯಾ ವಿಭಾಗಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಿದ್ದಾರೆ.
ಸೆಪ್ಟೆಂಬರ್ ೨೫ರಿಂದ ತರಗತಿಗಳು ಆರಂಭವಾಗಲಿದ್ದು, ನಟನೆ, ನಿರ್ದೇಶನ, ನೃತ್ಯ, ಯೋಗ, ಕಿಕ್ ಬಾಕ್ಸಿಂಗ್, ವಿ.ಎಫ್.ಎಕ್ಸ್, ಸಂಕಲನ ಸೇರಿದಂತೆ ವಿವಿಧ ತರಬೇತಿಗಳು ಶುರುವಾಗಲಿದೆ. ಮೂರು ತಿಂಗಳ ಕೋರ್ಸ್ ಇದಾಗಿದ್ದು, ಪ್ರತಿಯೊಂದು ಬ್ಯಾಚ್ ಮುಗಿದ ಬಳಿಕ ನಾಟಕ ಹಾಗೂ ಕಿರುಚಿತ್ರದಲ್ಲಿ ನಟಿಸಿ, ನಿರ್ದೇಶಿಸುವ ಅವಕಾಶ ಪ್ರತಿಯೊಬ್ಬ ವಿದ್ಯಾರ್ಥಿಗೂ ಕಲ್ಪಿಸಲಾಗಿದೆ. ಇದರ ಜೊತೆಗೆ ವೈಯಕ್ತಿಕ ತರಬೇತಿ ಸಹ ನೀಡಲಾಗುವುದು ಎಂದು ಸಂಸ್ಥಾಪಕ ಗುರು ದೇಶಪಾಂಡೆ ತಿಳಿಸಿzರೆ. ಅಲ್ಲದೇ ಮೂರು ಮತ್ತು ಆರು ತಿಂಗಳ ಅಭಿನಯ, ಮೂರು ತಿಂಗಳ ಪ್ರತ್ಯೇಕವಾದ ಚಿತ್ರ ನಿರ್ದೇಶನ, ಸಂಕಲನ, ನಿರೂಪಣೆ ಹಾಗೂ ಸುದ್ದಿ ಓದುವುದು ಮತ್ತು ವೈಯಕ್ತಿಕ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಇದೇ ಸಂಸ್ಥೆಯಿಂದ ಈಗಾಗಲೇ ಪ್ರಜ್ವಲ್ ದೇವರಾಜ್ ಅಭಿನಯದ ’ಜಂಟಲ್ಮನ್’, ಅಜೇಯ್ರಾವ್ ಮತ್ತು ಯೋಗಿ ಅಭಿನಯದ ಹೊಸ ಚಿತ್ರಗಳು ನಿರ್ಮಾಣವಾಗುತ್ತಿದೆ. ವಿಶೇಷವೆಂದರೆ ಗುರು ದೇಶಪಾಂಡೆ ಅವರೊಂದಿಗೆ ಕೆಲಸ ಮಾಡಿ ಅನುಭವ ಹೊಂದಿದ್ದ ಯುವ ನಿರ್ದೇಶಕರಿಗೆ ಅವಕಾಶ ನೀಡಲಾಗಿದೆ. ಇನ್ನು ಈ ಸಂಸ್ಥೆಯಲ್ಲಿ ತರಬೇತಿ ಪಡೆದು ಉತ್ತೀರ್ಣರಾದವರಿಗೆ ಗುರು ದೇಶಪಾಂಡೆ ಅವರ ಪ್ರೊಡಕ್ಷನ್ಸ್ ಅಡಿ ನಿರ್ಮಾಣವಾಗುವ ಸಿನಿಮಾಗಳಲ್ಲಿ ಕಾರ್ಯನಿರ್ವಹಿಸುವ ಅದೃಷ್ಟ ಒದಗಲಿದೆ.
ಹೆಚ್ಚಿನ ಮಾಹಿತಿಗಾಗಿ ೯೯೦೦೭ ೭೭೨೨೨ ನಂಬರನ್ನು ಸಂಪರ್ಕಿಸಬಹುದು.
No Comment! Be the first one.