ವೈಟ್ ಪ್ಯಾಂಥರ್ಸ್ ಕ್ರಿಯೇಟರ್ಸ್ ಸಂಸ್ಥೆಯವರು ನಿರ್ಮಿಸುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ `ಮತ್ತೆ ಉದ್ಭವ` ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ವಿ.ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ಎಸ್.ಮೋಹನ್ ಸಂಭಾಷಣೆ ಬರೆದಿದ್ದಾರೆ. ವಸಂತ್ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿದೆ.
ಇನ್ನು ಗುರುಪ್ರಸಾದ್ ಮುದ್ರಾಡಿ ಅವರು ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. `ಪ್ರೀಮಿಯರ್ ಪದ್ಮಿನಿ` ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ.ಡಿ.ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
No Comment! Be the first one.