ಸವಾಲಿನ ಪಾತ್ರಗಳಲ್ಲಿ ಗುರುತಿಸಿಕೊಂಡು ಸೈ ಎನ್ನಿಸಿಕೊಂಡಿರುವ ನೀನಾಸಂ ಸತೀಶ್ ಸದ್ಯ ಬ್ರಹ್ಮಚಾರಿ ಸಿನಿಮಾದ ಬ್ಯುಸಿಯಲ್ಲಿದ್ದಾರೆ. ಈ ಚಿತ್ರವು ಬಹುತೇಕ ಚಿತ್ರೀಕರಣವನ್ನು ಮುಗಿಸಿ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ.
ಈ ಮಧ್ಯೆ ಸತೀಶ್ ಮತ್ತೊಂದು ಸಿನಿಮಾದಲ್ಲಿ ನಟಿಸುವುದು ನಿಕ್ಕಿಯಾಗಿದೆ. ಸತೀಶ್ ಅವರ ಹುಟ್ಟುಹಬ್ಬದಂದು ಚಿತ್ರದ ಅಧಿಕೃತ ಮಾಹಿತಿಯೂ ಹೊರಬೀಳಲಿದೆ. ಈ ಹೊಸ ಚಿತ್ರಕ್ಕೆ ಕಿನಾರೆ ನಿರ್ದೇಶಕ ದೇವರಾಜ್ ಪೂಜಾರಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ವಿಶೇಷವೆಂದರೆ ಈ ಚಿತ್ರದಲ್ಲಿ ಸತೀಶ ರೆಟ್ರೋ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ಧಾರೆ.
No Comment! Be the first one.