ಲಕ್ಷ್ಮೀವೆಂಕಟೇಶ್ವರ ಕಂಬೈನ್ಸ್ ಲಾಂಛನದಲ್ಲಿ ಬಿ.ಎಸ್. ಸುಧೀಂದ್ರ ಅವರು ನಿರ್ಮಾಣ ಮಾಡುತ್ತಿರುವ ಪ್ರೊಡಕ್ಷನ್ ನಂ 6 ನೂತನ ಚಿತ್ರದ ಮುಹೂರ್ತ ಸಮಾರಂಭ ವರಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. `ಕಿಲ್ಲಿಂಗ್ ವೀರಪ್ಪನ್` ಚಿತ್ರದ ನಂತರ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ರಘು ಕೋವಿ ನಿರ್ದೇಶನ ಮಾಡುತ್ತಿದ್ದು, ಕಥೆ ಚಿತ್ರಕತೆಯ ಜವಾಬ್ದಾರಿಯನ್ನು ಅವರೇ ಹೊತ್ತಿದ್ದಾರೆ.
ಇನ್ನು ಪಾರ್ವತಮ್ಮ ರಾಜ್ ಕುಮಾರ್ ಅವರ ಸಹೋದರ ಎಸ್.ಎ. ಶ್ರೀನಿವಾಸ್ ಅವರ ಪುತ್ರ ಸೂರಜ್ ಕುಮಾರ್ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಪ್ರಿಯ ವಾರಿಯರ್ ನಟಿಸುತ್ತಿದ್ದಾರೆ. ಪ್ರೇಮ ಕಥಾ ಹಂದರದ ಈ ಚಿತ್ರದಲ್ಲಿ 5 ಹಾಡುಗಳಿದ್ದು, 3 ಸಾಹಸ ಸನ್ನಿವೇಶಗಳಿರಲಿದ್ದು, ಸೂರಜ್ ಅವರನ್ನು ಆಯ್ಕೆ ಮಾಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಲಹೆ ಕೊಟ್ಟರು ಎನ್ನತ್ತಾರೆ ನಿರ್ಮಾಪಕ ಸುಧೀಂದ್ರ.
No Comment! Be the first one.